ಡಿಕೆಶಿಗೆ ಸಂಕಷ್ಟ

ಡಿಕೆಶಿಗೆ ಸಂಕಷ್ಟ

ಬೆಂಗಳೂರು, ಆ. 30 : ಮಧ್ಯಂತರ ರಕ್ಷಣೆ ಕೋರಿದ್ದ ಅರ್ಜಿ ಹೈ ಕೋರ್ಟ್ ವಜಾಗೊಳಿಸಿದ ಹಿನ್ನಲೆ ಮಾಜಿ ಸಚಿವ ಡಿಕೆಶಿವಕುಮಾರಗೆ ಸಂಕಷ್ಟ. ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಎದುರು ವಿಚಾರಣೆಗೆ ಹಾಜರಾಗುವ ಸಂಬಂಧ ಮಧ್ಯಂತರ ರಕ್ಷಣೆ ಕೋರಿ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್ ವಜಾಗೊಳಿಸಿದೆ.
ದೆಹಲಿ ನಿವಾಸಗಳ ಮೇಲೆ ಐಟಿ ದಾಳಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಎದುರು ವಿಚಾರಣೆಗೆ ಹಾಜರಾಗುವಂತೆ ನೀಡಿದ್ದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ನಿನ್ನೆಯಷ್ಟೇ ವಜಾಗೊಂಡ ಹಿನ್ನೆಲೆಯಲ್ಲಿ ಇಡಿ ಎದುರು ವಿಚಾರಣೆಗೆ ಹಾಜರಾಗಬೇಕೆಂದು ಸಮನ್ಸ್ ನೀಡಲಾಗಿತ್ತು.
ಸಮಯಾವಕಾಶ ಮತ್ತು ಮಧ್ಯಂತರ ರಕ್ಷಣೆ ಕೋರಿ ಹೈಕೋರ್ಟ್ಗೆ ಶಿವಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಅರವಿಂದ್ಕುಮಾರ್ ಅವರ ಪೀಠ ಅರ್ಜಿಯನ್ನು ವಜಾಗೊಳಿಸಿದ್ದು, ಈಗ ಡಿ.ಕೆ.ಶಿವಕುಮಾರ್ ಅವರಿಗೆ ಬಂಧನದ ಭೀತಿ ಎದುರಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos