“ಡಿ.ಎನ್.ಎ. ನೋಡಿ ಟಿಕೆಟ್ ಕೊಡಲಾಗುವುದಿಲ್ಲ…” ಬಿ. ಎಲ್. ಸಂತೋಷ್

“ಡಿ.ಎನ್.ಎ. ನೋಡಿ ಟಿಕೆಟ್ ಕೊಡಲಾಗುವುದಿಲ್ಲ…” ಬಿ. ಎಲ್. ಸಂತೋಷ್

ಚಾಮರಾಜನಗರ, ಏ. 11, ನ್ಯೂಸ್ ಎಕ್ಸ್ ಪ್ರೆಸ್: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಅನಂತಕುಮಾರ್ ಅವರ ಬದಲಿಗೆ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿರುವ ಕುರಿತಂತೆ ಬಿಜೆಪಿ ರಾಷ್ಟ್ರೀಯ ಸಹ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಚಾಮರಾಜನಗರದಲ್ಲಿ ನಡೆದ ಪ್ರಬುದ್ಧರ ಗೋಷ್ಠಿಯಲ್ಲಿ ಮಾತನಾಡಿದ ಬಿ.ಎಲ್. ಸಂತೋಷ್, ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ ಎಂಬುದು ಸರಿಯಲ್ಲ. ಪಕ್ಷದಲ್ಲಿ 20 ರಿಂದ 30 ವರ್ಷ ಉಳಿಯುವ ಸಾಮರ್ಥ್ಯವಿರುವವರನ್ನು ನೋಡಿ ಟಿಕೆಟ್ ನೀಡಬೇಕಾಗುತ್ತದೆ. ಡಿಎನ್ಎ ನೋಡಿ ಇದನ್ನು ಕೊಡಲಾಗುವುದಿಲ್ಲ ಎಂದು ಹೇಳಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಅವರ ಸಾಮರ್ಥ್ಯವನ್ನು ನೋಡಿ ಈಗ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಕಟ್ಟಿದವರಲ್ಲಿ ಅನಂತಕುಮಾರ್ ಕೂಡಾ ಒಬ್ಬರು. ಹೀಗಾಗಿ ಪಕ್ಷ ಅವರಿಗೆ ಸೂಕ್ತ ಸ್ಥಾನಮಾನ ನೀಡಿತ್ತು ಎಂದು ಹೇಳಿದ್ದಾರೆ. ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿಸಿರುವುದರ ಹಿಂದೆ ಸಂತೋಷ್ ಅವರ ಕೈವಾಡವಿದೆ ಎಂಬ ಮಾತುಗಳು ಕೇಳಿ ಬಂದಿದ್ದರ ಮಧ್ಯೆ ಬಿ.ಎಲ್. ಸಂತೋಷ್ ಇದಕ್ಕೆ ಈಗ ಸ್ಪಷ್ಟನೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos