ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ

ದೊಡ್ಡಬಳ್ಳಾಪುರ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಅಗ್ನಿ ಅನಾಹುತ

ಬೆಂಗಳೂರು, ಮೇ.9, ನ್ಯೂಸ್ ಎಕ್ಸ್ ಪ್ರೆಸ್:  ಬೆಂಗಳೂರು ಹೆದ್ದಾರಿ ಪಕ್ಕದಲ್ಲೇ ಇರುವ ಮಮತ ಪೆಟ್ರೋಲ್ ಬಂಕ್ ಬಳಿ ಅವಘಡ ಸಂಭವಿಸಿದ್ದು, ಗೋದಾಮಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಟೈರ್​ಗಳು ಸುಟ್ಟುಹೋಗಿವೆ. ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಟ್ರ್ಯಾಕ್ಟರ್ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಹೆದ್ದಾರಿ ಪಕ್ಕದಲ್ಲೇ ಇರುವ ಮಮತ ಪೆಟ್ರೋಲ್ ಬಂಕ್ ಬಳಿ ಬೆಂಕಿ ಅನಾಹುತ ಸಂಭವಿಸಿದ್ದು,ಗೋಡೌನ್‌ನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಟೈರ್​ಗಳು ಸುಟ್ಟು ಭಸ್ಮವಾಗಿವೆ. ಸುದೈವವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಘಟನೆ ನಡೆದ ಸ್ಥಳದಲ್ಲೇ ಪೆಟ್ರೋಲ್ ಬಂಕ್ ಇರುವ ಕಾರಣ ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಟೈರ್ ಸುಟ್ಟ ಹಿನ್ನೆಲೆಯಲ್ಲಿಆವರಿಸಿದ ದಟ್ಟ ಹೊಗೆ ಹಾಗೂ ವಾಸನೆಯ ಕಾರಣ ಜನರಿಗೆ ಉಸಿರಾಟಕ್ಕೆ ತೊಂದರೆಯಾಗಿತ್ತು. ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos