ದಾವಣಗೆರೆ, ಡಿ.16 : ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲಾ, ಏನಿದ್ದರೂ ಸಿಎಂ ಒಬ್ಬರೇ ಸಾಕು. ಬಿಜೆಪಿ ಜಾತಿಗೆ ಸೀಮಿತವಾದ ಪಕ್ಷ ಅಲ್ಲ. ನಾನೂ ಕೂಡ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿ ಸಚಿವ ಸ್ಥಾನವನ್ನು ಹಾದಿ ಬೀದಿಯಲ್ಲಿ ಕೇಳುವುದಿಲ್ಲ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ಸಚಿವ ಸ್ಥಾನದಲ್ಲಿ ಬೇರೆ ಬೇರೆ ಜಿಲ್ಲೆಗೆ ಅವಕಾಶ ಕೊಟ್ಟಿದ್ದಾರೆ. ದಾವಣಗೆರೆ ಚಿತ್ರದುರ್ಗಕ್ಕೆ ಅವಕಾಶ ಸಿಕ್ಕಿಲ್ಲಾ. ನಾನು ಮೂರು ಬಾರಿ ಶಾಸಕರಾಗಿದ್ದೇನೆ. ಸಚಿವ ಸಂಪುಟ ವಿಸ್ತರಣೆ ಮಾಡುವುದು ಯಾರಿಗೆ ಸಚಿವ ಸ್ಥಾನ ನೀಡಬೇಕು ಎಂಬುದು ಹೈಕಮಾಂಡ್ ಗೆ ಬಿಟ್ಟ ವಿಚಾರ. ರಾಜ್ಯದಲ್ಲಿ ಮೂರುವರೆ ವರ್ಷ ಬಿಜೆಪಿ ಅಧಿಕಾರದಲ್ಲಿರುತ್ತದೆ ಎಂದು ತಿಳಿಸಿದರು.ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜಕೀಯದಲ್ಲಿ ಚಿಕ್ಕವರು. ದೇಶಕ್ಕಾಗಿ ಹೊರಾಡಿ ತ್ಯಾಗ ಮಾಡಿದ ವೀರ್ ಸಾವರ್ಕರ್ ಗೆ ಹೋಲಿಕೆ ಮಾಡಿ ಅವರ ಹೆಸರನ್ನು ದುರ್ಬಳಕೆ ಮಾಡಿದ್ದಾರೆ. ಕಾಂಗ್ರೆಸ್ ನಲ್ಲಿ ನಾಯಕತ್ವ ಇಲ್ಲದೇ ಸತ್ತುಹೋಗಿದೆ ಎಂದು ರಾಹುಲ್ ಗಾಂಧಿ ವಿರುದ್ದ ರೇಣುಕಾಚಾರ್ಯ ಕಿಡಿಕಾರಿದರು.