ಬೆಂಗಳೂರು, ಜು.18 : ಕಡೇ ಕ್ಷಣ ದೋಸ್ತಿ ಸರ್ಕಾರಕ್ಕೆ ಕೈ ಕೊಟ್ಟು ಮುಂಬೈ ಸೇರಿದ್ದ ಪಕ್ಷೇತರ ಶಾಸಕ ನಾಗೇಶ್ ಮುಂಬೈನಿಂದ ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಿಜೆಪಿ ಮುಖಂಡ ಆರ್. ಅಶೋಕ್ ಅವರೊಂದಿಗೆ ಆಗಮಿಸಿದ ನಾಗೇಶ್ ನೇರವಾಗಿ ಅವರದೇ ಜಾಲಹಳ್ಳಿಯ ನಿವಾಸಕ್ಕೆ ತೆರಳಿದರು.
ಅಶೋಕ್ ಕಾರಿನಲ್ಲೇ ನಾಗೇಶ್ ಅವರನ್ನು ಕರೆದೊಯ್ಯಲಾಗಿದ್ದು, ಐದು ವಾಹನಗಳಲ್ಲಿ ಬಿಜೆಪಿ ಕಾರ್ಯಕರ್ತರು ಅವರಿಗೆ ಬೆಂಗಾವಲು ಒದಗಿಸಿದ್ದರು ಎಂದು ತಿಳಿದುಬಂದಿದೆ. ವಿಶ್ವಾಸಮತ ಯಾಚನೆಯಲ್ಲಿ ಒಂದೊಂದು ಮತವು ನಿರ್ಣಾಯಕ ಪಾತ್ರ ವಹಿಸುತ್ತಿರುವುದರಿಂದ ನಾಗೇಶ್ ಬಿಜೆಪಿಗೆ ಬೆಂಬಲ ನೀಡುವುದಾಗಿ ರಾಜ್ಯಪಾಲರಿಗೆ ಪತ್ರ ನೀಡಿದ್ದರು.