ಬೆಂಗಳೂರು: ಬೆಂಗಳೂರಿನಲ್ಲಿ ಅಭಿಮಾನಿಗಳು ನಿರ್ಮಿಸಿದ್ದ ಡಾ. ರಾಜಕುಮಾರ್ ಪುತ್ತಳಿಯನ್ನು ಬಿಬಿಎಂಪಿ ಕೆಡವಿದ್ದು ಅಭಿಮಾನಿಗಳು ಆಕ್ರೋಶಕ್ಕೆ ಕಾರಣವಾಗಿದೆ ನಟ ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ಹಿನ್ನೆಲೆ ಚಿಕ್ಕಪೇಟೆಯಲ್ಲಿ ವಾರ ನಟ ಡಾಕ್ಟರ್ ರಾಜಕುಮಾರ್ ಪುತ್ಥಳಿಯನ್ನು ಸ್ಥಾಪಿಸಲಾಗಿತ್ತು.
ರಾಜ್ ಕುಮಾರ್ ಪ್ರತಿಮೆಯನ್ನು ಚಿಕ್ಕಪೇಟೆಯಲ್ಲಿ ಅಭಿಮಾನಿಗಳು ಸ್ಥಾಪಿಸಿದ್ದರು. ಪುತ್ಥಳಿ ಸ್ಥಾಪಿಸಿದ ಒಂದೇ ದಿನದಲ್ಲಿ ಅದನ್ನು ಬಿಬಿಎಂಪಿ ಜೆಸಿಬಿ ತರಿಸಿ ತೆರವು ಮಾಡಿದೆ. ಪುತ್ಥಳಿ ನಿಲ್ಲಿಸಲು ಮಾಡಿಸಲಾಗಿದ್ದ ಸಿಮೆಂಟಿನ ಕಟ್ಟೆಯನ್ನು ಒಡೆದುಹಾಕಲಾಗಿದೆ.
ಪ್ರತಿಮೆ ತೆರವು ವಿರೋಧಿಸಿ ಕನ್ನಡಪರ ಹೋರಾಟಗಾರರಿಂದ ಇಂದು ಚಿಕ್ಕಪೇಟೆಯಲ್ಲಿ ಪ್ರತಿಭಟನೆ ನಡೆಯಲಿದೆ. ಇದನ್ನು ತೆರವು ಮಾಡಿರುವುದು ಅನ್ಯಾಯ. ಇದು ಕನ್ನಡಿಗರನ್ನು ಕೆರಳಿಸುವ ಘಟನೆ. ಇದನ್ನು ವಿರೋಧಿಸಿ ಇಂದು ಪ್ರತಿಭಟನೆ ಮಾಡಲಿದ್ದೇವೆ” ಎಂದು ನಮ್ಮ ಕರ್ನಾಟಕ ಸೇನೆಯ ಯುವಘಟಕದ ಅಧ್ಯಕ್ಷರು ತಿಳಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯ ಸಾರ್ವಜನಿಕ ಸ್ಥಳದಲ್ಲಿ ಪುತ್ಥಳಿ ಸ್ಥಾಪನೆಗೆ ಅವರು ಅನುಮತಿ ಪಡೆದಿರಲಿಲ್ಲ. ಅನುಮತಿ ಇಲ್ಲದೆ ಇಂಥ ಪುತ್ಥಳಿ, ಪ್ರತಿಮೆ ಸ್ಥಾಪನೆ ಅನುಮತಿಸಲಾಗುವುದಿಲ್ಲ” ಎಂದು ಸ್ಥಳೀಯ ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.