ಸಂಗೀತ ವಿದ್ವಾಂಸ ಡಾ. ಸತ್ಯನಾರಾಯಣ ವಿಧಿವಶ

ಸಂಗೀತ ವಿದ್ವಾಂಸ ಡಾ. ಸತ್ಯನಾರಾಯಣ ವಿಧಿವಶ

ಮೈಸೂರು, ಜ. 17: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಸಂಗೀತ ವಿದ್ವಾಂಸ ಡಾ.ರಾ. ಸತ್ಯನಾರಾಯಣ (93) ಗುರುವಾರ ರಾತ್ರಿ ಜಯನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಇಂದು ಮಧ್ಯಾಹ್ನ 1.30 ರವರೆಗೆ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ 4.30ಕ್ಕೆ ಅಂತ್ಯಸಂಸ್ಕಾಆರವು ಮೈಸೂರು-ಬೆಂಗಳೂರು ರಸ್ತೆಯ ಕೆಂಗಾಲ್ ಗ್ರಾಮದ ಬಳಿ ರಸ ಋಷಿ ಆಶ್ರಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಜಯಚಾಮರಾಜ ಒಡೆಯರ್ ಅವರ ಆಸ್ಥಾನದಲ್ಲಿ ಸಂಗೀತ ವಿದ್ವಾಂಸರಾಗಿದ್ದ ರಾಮಯ್ಯ ಅವರ ಪುತ್ರರಾದ ಇವರು ಸಂತ ತ್ಯಾಗರಾಜ ಸಂಗೀತ ಪರಂಪರೆಯನ್ನು ಮುಂದುವರಿಸಿದವರು. ಇವರಿಗೆ ಕಾಶಿ ವಿಶ್ವವಿದ್ಯಾಲಯದಿಂದ ಮಹೋಪಧ್ಯಾಯ, ರಾಜ್ಯ ಸಂಗೀತ ವಿದ್ವಾನ್, ಸಂಗೀತ ನಾಟಕ ಅಕಾಡೆಮಿ ರತ್ನ, ವೀಣೆ ರಾಜಾರಾವ್ ರಾಷ್ಟ್ರೀಯ ಪ್ರಶಸ್ತಿ ಲಭಿಸಿದ್ದವು.

 

ಫ್ರೆಶ್ ನ್ಯೂಸ್

Latest Posts

Featured Videos