ಚಿಕ್ಕಬಳ್ಳಾಪುರ: ಡಾ. ಸುಧಾಕರ್ ಭರ್ಜರಿ ರಣತಂತ್ರ

ಚಿಕ್ಕಬಳ್ಳಾಪುರ: ಡಾ. ಸುಧಾಕರ್ ಭರ್ಜರಿ ರಣತಂತ್ರ

ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿರುವ ಡಾ. ಕೆ. ಸುಧಾಕರ್ ಅವರು ಇದೀಗ ಯಶಸ್ಸು ಪಡೆಯುತ್ತಿದ್ದಾರೆ. ಅದರಲ್ಲೂ ಸ್ಥಳೀಯ ಬಿಜೆಪಿ & ಜೆಡಿಎಸ್ ಮುಖಂಡರು ಬೆಂಬಲ ನೀಡುತ್ತಾ ಇರುವುದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಸುಧಾಕರ್ ಅವರಿಗೆ ಸಾಕಷ್ಟು ಬಲ ಸಿಕ್ಕಂತಾಗಿದೆ. ಅಲ್ಲದೆ ಗೆಲ್ಲುವ ರೇಸ್‌ನಲ್ಲಿ ಡಾ. ಕೆ. ಸುಧಾಕರ್ ಅವರು ಮತ್ತಷ್ಟು ಮುನ್ನುಗ್ಗುತ್ತಿದ್ದಾರೆ.

ಡಾ. ಸುಧಾಕರ್ ಅವರು ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಬಹುತೇಕ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ಮನೆಗಳಿಗೆ ಖುದ್ದು ಭೇಟಿ ನೀಡಿ ಸಹಕಾರ ಕೋರಿದ್ದಾರೆ. ಹೀಗೆ ಸ್ಥಳೀಯ ಮುಖಂಡರು ಡಾ. ಕೆ. ಸುಧಾಕರ್ ಅವರ ಪರವಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನೂ ಭೇಟಿ ಮಾಡಿ, ಸಮಾಲೋಚನೆ ನಡೆಸಿದ್ದಾರೆ ಡಾ. ಸುಧಾಕರ್ ಅವರು. ಜೆಡಿಎಸ್ ಪ್ರಭಾವ ಹೆಚ್ಚಿರುವ ದೇವನಹಳ್ಳಿ ಸೇರಿ ದೊಡ್ಡಬಳ್ಳಾಪುರ ಮತ್ತು ನೆಲಮಂಗಲದಲ್ಲಿ ಸಮನ್ವಯ ಸಭೆ ನಡೆಯಲಿದ್ದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಉಪಸ್ಥಿತರಿರಲಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ, ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಡಾ. ಕೆ. ಸುಧಾಕರ್‌ ಅವರನ್ನು ಅಭ್ಯರ್ಥಿಯಾಗಿಸಲು ಸಂಪೂರ್ಣ ಸಹಕಾರ ನೀಡಿದ್ದು, ಸಹಯೋಗದಲ್ಲಿ ಕಾರ್ಯನಿರ್ವಹಿಸುವ ಸಂದೇಶ ನೀಡಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos