ಬಳ್ಳಾರಿ, ಸೆ. 3: ಭಾರೀ ಮಳೆಗೆ ಪ್ರವಾಹದಂತೆ ಕೊಳಚೆ ನೀರು ಮನೆಗಳಿಗೆ ನುಗ್ಗಿದ ಪರಿಣಾಮ ನಿವಾಸಿಗಳು ಸಂಕಷ್ಟಕ್ಕೆ ಒಳಗಾಗಿದ್ದಾರೆ. ನಿವಾಸಿಗಳು ನಗರ ಪಾಲಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗಣೇಶ ಕಾಲೋನಿಯಲ್ಲಿ ಮನೆಗಳು ಒಳಚರಂಡಿ ನೀರಿನಿಂದ ಆವೃತಗೊಂಡಿದೆ. ಸಂತ್ರಸ್ತ ನಿವಾಸಿಗಳು ಸಮಸ್ಯೆ ಪರಿಹಾರ ಮಾಡದಿರುವ ಕಾರಣಕ್ಕೆ ಆಕ್ರೋಶಗೊಂಡಿದ್ದಾರೆ.
ಸ್ಥಳಕ್ಕೆ ನಗರ ಶಾಸಕ ಸೋಮಶೇಖರ್ ರೆಡ್ಡಿ ಭೇಟಿ ನೀಡಿ ವೀಕ್ಷಿಸಿದರು. ಮಹಾನಗರ ಪಾಲಿಕೆ ಆಯುಕ್ತೆ ತುಷಾರಾಮಣಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೆ ಜಲಾವೃತ ಆದ ಮನೆಯ ಕಟ್ಟೆಯ ಮೇಲೆ ಕುಳಿತು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.