ಕುಡಿಯುವ ನೀರಿನ ಸಮಸ್ಯೆಗಳಿಗೆ ಸಹಾಯವಾಣಿ ಆರಂಭ

  • In Metro
  • May 11, 2019
  • 251 Views
ಕುಡಿಯುವ ನೀರಿನ ಸಮಸ್ಯೆಗಳಿಗೆ ಸಹಾಯವಾಣಿ ಆರಂಭ

ಬೆಂಗಳೂರು, ಮೇ. 11, ನ್ಯೂಸ್ ಎಕ್ಸ್ ಪ್ರೆಸ್:  ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ಬರುವ ದೂರುಗಳಿಗೆ ತಕ್ಷಣವೇ ಸ್ಪಂದಿಸುವಂತೆ ಎಲ್ಲ ಅಧಿಕಾರಿಗಳಿಗೂ ಸೂಚನೆ ನೀಡಲಾಗಿದೆ . ಕುಡಿಯುವ ನೀರಿನ ಸಮಸ್ಯೆಗಳಿಗೆ ಸಂಬಂಧಪಟ್ಟ ಹಾಗೆ ಎಲ್ಲ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕಾಲ್ ಸೆಂಟರ್ ಗಳನ್ನು ತೆರೆಯಲಾಗಿದೆ. ಸಾರ್ವಜನಿಕರು ಈ ಸಂಖ್ಯೆಗೆ ಕರೆ ಮಾಡಿ ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ. ಈ ದೂರುಗಳ ಬಗ್ಗೆ ತಕ್ಷಣವೇ ಸ್ಥಳೀಯ ಅಧಿಕಾರಿಗಳು ಗಮನಹರಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ. ಕಾಲ್ ಸೆಂಟರ್ ವಿವರಗಳನ್ನು ಕೆಳಕಂಡಂತೆ ಒದಗಿಸಲಾಗಿದೆ ಈ ಕಾಲ್ಸೆಂಟರ್ಗಳ ದೂರವಾಣಿ ಸಂಖ್ಯೆಗಳನ್ನು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ವೆಬ್ ಸೈಟ್ rdpr.kar.nic.in ಇದರಲ್ಲಿಯೂ ಸಹ ಪ್ರಕಟಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ .

ಫ್ರೆಶ್ ನ್ಯೂಸ್

Latest Posts

Featured Videos