ಪ್ರಶಿಕ್ಷಣ ವರ್ಗ ತರಬೇತಿ ಶಿಬಿರಕ್ಕೆ ಚಾಲನೆ

ಪ್ರಶಿಕ್ಷಣ ವರ್ಗ ತರಬೇತಿ ಶಿಬಿರಕ್ಕೆ ಚಾಲನೆ

ಪೀಣ್ಯ ದಾಸರಹಳ್ಳಿ: ಸರ್ಕಾರದ ಸೌಲಭ್ಯಗಳು ಎಲ್ಲಾ ಗ್ರಾಮಗಳಿಗೆ ತಲುಪಿದ್ದು ಮುಂದಿನ ಗ್ರಾಮ ಪಂಚಾಯಿತಿ ಚುನಾವಣೆಗೆ ಬಿಜೆಪಿ ಗ್ರಾಮ ಹಾಗೂ ವಾರ್ಡ್ ಮಟ್ಟದಲ್ಲಿ ಬಲವಾಗಲು ಶ್ರಮಿಸಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ತಿಳಿಸಿದರು.
ದಾಸರಹಳ್ಳಿ ಸಮೀಪದ ಬಾಗಲಗುಂಟೆಯ ಮಹಾಲಕ್ಷ್ಮೀ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪ್ರಶಿಕ್ಷಣ ವರ್ಗ ತರಬೇತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ ಪ್ರತಿ ಗ್ರಾಮ ವಾರ್ಡ್ ಮಟ್ಟದಲ್ಲಿ ಯುವಕರಿಗೆ ನಾಯಕತ್ವ ಗುಣ ಬೆಳೆಸುವ ಮೂಲಕ ಮುಂದಿನ ದಿನಗಳಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಬಲ ನೀಡಲಾಗುತ್ತದೆ ವಾರ್ಡ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುತ್ತಿದ್ದೇವೆ ಎಂದು ತಿಳಿಸಿದರು.
ಬಿಜೆಪಿ ಘಟಕದಲ್ಲಿ ಹೊಸದಾಗಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದು, ಪ್ರತಿಯೊಬ್ಬರಿಗೂ ಬಿಜೆಪಿ ಸಿದ್ದಾಂತ, ಇತಿಹಾಸ ಸಂಘಟನೆ, ನಮ್ಮ ಪಕ್ಷದ ತತ್ವ ಸಿದ್ದಂತಾ ಬಿಜೆಪಿ ಪಕ್ಷ ನಡೆದು ಬಂದ ಹಾದಿ ಬಗ್ಗೆ ಎರಡು ದಿನಗಳ ಕಾಲ ತರಬೇತಿ ನೀಡಲಾಗಿದೆ.ಮುಂದಿನ ದಿನಗಳಲ್ಲಿ ಬಿಜೆಪಿ ಬಹಳಷ್ಟು ಬಲವಾಗಲಿದೆ ಎಂದು ವಿವರಿಸಿದರು.
ಮಾಜಿ ಶಾಸಕ ಎಸ್.ಮುನಿರಾಜು ಮಾತನಾಡಿ ಮುಂದಿನ ದಿನಗಳಲ್ಲಿ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ, ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಬರಲಿದ್ದು , ಬಿಜೆಪಿ ಬಹುಮತ ಪಡೆದುಕೊಳ್ಳಲಿದೆ.
ಬಿಜೆಪಿ ಪದಾಧಿಕಾರಿಗಳಿಗೆ ಎರಡು ದಿನಗಳ ೧೦ ವಿಷಯಾಧಾರಿತ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿದೆ. ಸೋಮವಾರ ಹಾಗೂ ಮಂಗಳವಾರ ತರಬೇತಿ ನಡೆಯಲಿದೆ.

ಫ್ರೆಶ್ ನ್ಯೂಸ್

Latest Posts

Featured Videos