ಮೈಸೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ದಸರಾ ಆನೆ ದ್ರೋಣನ ಸಾವಿನ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸುವಂತೆ ಒತ್ತಾಯಿಸಿ ಮೈಸೂರು ಅರಮನೆ ಮುಂದೆ ಮಲಗಿ ಕನ್ನಡ ವಿನೂತನ ಪ್ರತಿಭಟನೆ ನಡೆಸಿದರು.
ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ದ್ವಾರದ ಅರಮನೆ ಬಾಗಿಲಲ್ಲಿ ಮಲಗಿ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದರು.
ಆನೆಗಳನ್ನು ದಸರಾ ಸಂದರ್ಭದಲ್ಲಿ ಮಾತ್ರ ಚೆನ್ನಾಗಿ ಪೋಷಣೆ ಮಾಡಿ ಪೋಷಕಾಂಶಗಳ ಕೊಟ್ಟು ಪೋಷಿಸುತ್ತಾರೆ. ದ್ರೋಣ ಸಾಯುವ ಸಮಯದಲ್ಲಿ ಯಾವ ರೀತಿ ಆಹಾರ ನೀಡಿದರು? ಯಾವ ರೀತಿ ನೋಡಿಕೊಳ್ಳುತ್ತಿದ್ದರು? ಎಂಬುದು ಸಮಗ್ರ ತನಿಖೆ ಆಗಬೇಕು ಎಂದು ಆಗ್ರಹಿಸಿದರು.