ಬರಪರಿಹಾರ ಬಿಡುಗಡೆ: ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಬರಪರಿಹಾರ ಬಿಡುಗಡೆ: ಸಿದ್ದರಾಮಯ್ಯ ಪ್ರತಿಕ್ರಿಯೆ ಏನು..?

ಕಲಬುರುಗಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರ 3,454 ಕೋಟಿ ರೂ ಬರಪರಿಹಾರ ಬಿಡುಗಡೆ ಮಾಡಿದ್ದು, ಈ ಕುರಿತು ಮಾಧ್ಯಮಮಿತ್ರರೊಂದಿಗೆ ಪ್ರತಿಕ್ರಿಯಿಸಿದ ಸಿಎಂ, ನಮಗೆ ಬಹಳ ಕಡಿಮೆ ಪರಿಹಾರ ಕೊಟ್ಟಿದ್ದಾರೆ ಎಂದು ಹೇಳಿದರು.

ಸೆಪ್ಟೆಂಬರ್ ನಲ್ಲಿಯೇ ನಾವು 18,174 ಕೋಟಿ ರೂ. ಬರ ಪರಿಹಾರ ನೀಡಲು ಮನವಿ ಮಡಿದ್ದೆವು. ಆಗ ಅಮಿತ್ ಶಾ ಚುನಾವಣಾ ನೀತಿ ಸಂಹಿತೆ ಇದೆ ಎಂದರು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನಾವು ಬರ ಪರಿಹಾರ ಕೇಳಿಲ್ಲ, ಗ್ಯಾರಂಟಿಗೆ ಹಣ ಕೇಳಿದ್ದಾರೆ ಎಂದರು. ನಾವು ಗ್ಯಾರಂಟಿ ಯೋಜನೆಗೆ ಕೇಂದ್ರದ ಬಳಿ ಹಣ ಕೇಳಿಲ್ಲ ಎಂದು ತಿಳಿಸಿದರು.

ಬಳಿಕ ಡಿಸೆಂಬರ್ 20ರಂದು ನಾನು, ಸಚಿವ ಕೃಷ್ಣಬೈರೇಗೌಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದೆವು. ಆಗ ಸಭೆ ನಡೆಸುವುದಾಗಿ ಹೇಳಿದರು. ಯಾವುದೇ ಸಭೆಯನ್ನೂ ನಡೆಸಿಲ್ಲ. ಬರ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕೆ ನಾವು ಸುಪ್ರೀಂ ಕೋರ್ಟ್ ಮೊರೆ ಹೋಗಬೇಕಾಯ್ತು. ಈಗ ಪ್ರಧಾನಿ ನರೇಂದ್ರ ಮೋದಿ ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹಾಗಾಗಿ ಬರ ಪರಿಹಾರ ಘೋಷಣೆ ಮಾಡಿದ್ದಾರೆ. ಆದರೆ ಇದು ತುಂಬಾ ಕಡಿಮೆ ಪ್ರಮಾನದ ಪರಿಹಾರವಾಗಿದೆ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos