ದೇವೇಗೌಡರ ಸೋಲು ಖಚಿತ : ಭವಿಷ್ಯ ನುಡಿದ ಬಿಜೆಪಿ ನಾಯಕ

ದೇವೇಗೌಡರ ಸೋಲು ಖಚಿತ : ಭವಿಷ್ಯ ನುಡಿದ ಬಿಜೆಪಿ ನಾಯಕ

ಬೆಂಗಳೂರು, . 3, ನ್ಯೂಸ್ ಎಕ್ಸ್ ಪ್ರೆಸ್:  ತುಮಕೂರು ಕ್ಷೇತ್ರದಲ್ಲಿ  ಸ್ಪರ್ಧಿಸಿರುವ ದೇವೇಗೌಡರು ಸೋಲುವುದು ಖಚಿತ. ಹಿಂದೆ ಜೆಡಿಎಸ್ ನಲ್ಲಿ ಅಪ್ಪ- ಮಕ್ಕಳ ರಾಜಕೀಯವಿತ್ತು. ಇದೀಗ ಕುಟುಂಬದ ಎಲ್ಲ ಸದಸ್ಯರನ್ನು ಸಂಸದರನ್ನಾಗಿಸಲು ದೇವೇಗೌಡರು ಮುಂದಾಗಿದ್ದಾರೆ. ಪ್ರಜ್ಞಾವಂತ ಜನರು ಎಲ್ಲವನ್ನೂ ವೀಕ್ಷಿಸುತ್ತಿದ್ದಾರೆ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಕೂಟಕ್ಕೆ ತಕ್ಕ ಉತ್ತರ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಡ್ಯದಿಂದ ಸ್ಪರ್ಧಿಸಿರುವ ಸುಮಲತಾ ಅಂಬರೀಷ್ ಬಗ್ಗೆ ಕುಮಾರಸ್ವಾಮಿ ಹಗುರವಾಗಿ ಮಾತನಾಡುತ್ತಿದ್ದಾರೆ. ಜಾತಿ ವಿಷ ಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದಾರೆ. ಮಹಿಳೆ ಬಗ್ಗೆ ಕನಿಷ್ಠವಾಗಿ ಮಾತನಾಡುವುದುಎಷ್ಟು ಸರಿ ಎಂದು ಪ್ರಶ್ನಿಸಿದರಲ್ಲದೆ, ರಾಹುಲ್ ಗಾಂಧಿಯವರು ಚುನಾವಣೆಯಲ್ಲಿ ಸುಳ್ಳು ಭರವಸೆಗಳನ್ನು ನೀಡುವ ಮೂಲಕ ಜನರನ್ನು ವಂಚಿಸಲು ಹೊರಟಿದ್ದಾರೆ ಎಂದರು.

ಪಕ್ಷದ ವರಿಷ್ಠರಿಗೆ ನಾನು 1800 ಕೋಟಿ ಹಣ ವರ್ಗಾವಣೆ ಮಾಡಿದ್ದಾಗಿ ಕಾಂಗ್ರೆಸ್ ಆರೋಪಿಸಿದೆ. ಡೈರಿ ಬಾಂಬ್ ಸಿಡಿಸಿದ್ದಾಗಿ ಹೇಳುತ್ತಿದೆ. ತನಿಖೆ ನಡೆಸಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆಂದು ಸವಾಲು ಹಾಕಿದರು. ಕಾಂಗ್ರೆಸ್ಸಿಗರಿಗೆ ಬಿಜೆಪಿ ನಾಯಕರ ವಿರುದ್ಧ ಆರೋಪ ಮಾಡಲು ಬೇರೇನೂ ಸಿಕ್ಕಿಲ್ಲ. ಹೀಗಾಗಿ ಮನಸ್ಸಿಗೆ ಬಂದಂತೆ ಮಾತನಾಡು ತ್ತಿದ್ದಾರೆ ಎಂದು.

ಫ್ರೆಶ್ ನ್ಯೂಸ್

Latest Posts

Featured Videos