ಗೆಲ್ಲಲು ದೇವೇಗೌಡರ ಪ್ಲಾನ್ !

ಗೆಲ್ಲಲು ದೇವೇಗೌಡರ ಪ್ಲಾನ್ !

ಬೆಂಗಳೂರು, ಅ. 17 : ಪಕ್ಷ ಸಂಘಟನೆ, ಮುಂಬರುವ ವಿವಿಧ ಚುನಾವಣೆಗಳ ಸಿದ್ಧತೆ ಆರಂಭಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ನಾಳೆ ವಿಧಾನಪರಿಷತ್ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಸಂಬಂಧ ಮಹತ್ವದ ಸಭೆ ನಡೆಸಲಿದ್ದಾರೆ.
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಮತ್ತು ದಾವಣಗೆರೆ ಒಳಗೊಂಡಂತೆ ವಿಧಾನಪರಿಷತ್ನ ಪದವೀಧರ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಒಮ್ಮತದ ಅಭ್ಯರ್ಥಿ ಆಯ್ಕೆ ಮಾಡುವ ಉದ್ದೇಶದಿಂದ ಸಭೆ ಕರೆಯಲಾಗಿದೆ.
ವಿಧಾನಸಭೆ ಉಪಚುನಾವಣೆ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ, ವಿಧಾನಪರಿಷತ್ನ ಚುನಾವಣೆಗೆ ನಿರಂತರವಾಗಿ ಸಿದ್ದತೆ ನಡೆಸಲಾಗುತ್ತಿದ್ದು, ನಾಳೆ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಮಾಡುವ ಸಂಬಂಧ ಮುಖಂಡರ ಅಭಿಪ್ರಾಯ ಪಡೆಯಲಾಗುತ್ತದೆ. ಪದವೀಧರ ಕ್ಷೇತ್ರದ ಚುನಾವಣೆಗೆ ಎಲ್ಲರೂ ಒಟ್ಟಾಗಿ ಶ್ರಮಪಟ್ಟರೆ ಗೆಲುವು ನಮ್ಮ ಪಕ್ಷದ್ದಾಗಲಿದೆ ಎಂದು ಅಭಿಪ್ರಾಯಪಟ್ಟಿರುವ ಗೌಡರು, ಸಹಮತದಿಂದ ಅರ್ಹ ಅಭ್ಯರ್ಥಿಯನ್ನುಕಣಕ್ಕಿಳಿಸಲು ಸಹಕರಿಸಬೇಕಾಗಿದೆ ಎಂದು ಕೋರಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos