ಬೆಂಗಳೂರು: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ನಾಳೆ ಮೊದಲ ಹಂತದ ಚುನಾವಣೆ ನಡೆಯಲಿದ್ದು, ಮತದಾನ ಮಾಡಿದವರಿಗೆ ಬೆಂಗಳೂರಿನ ಕೆಲವು ಹೋಟೆಲ್ಗಳು ಊಚಿತ ಆಹಾರ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ನಗರದಲ್ಲಿ ಕಳೆದ ಬಾರಿ ಮತದಾನ ಕಡಿಮೆ ಪ್ರಮಾಣದಲ್ಲಿ ಆಗಿದ್ದು, ಈ ಕಾರಣದಿಂದ ಮತದಾನಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ನಿಯಮವನ್ನು ಅನುಸರಿಸುತ್ತಿದ್ದೇವೆ ಎಂದು ಹೋಟೆಲ್ ಮಾಲೀಕರು ಹೇಳಿದ್ದಾರೆ.
ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ನಿಸರ್ಗ ಗ್ರ್ಯಾಂಡ್ ಹೋಟೆಲ್ “ವೋಟ್ ಮಾಡಿ, ಊಟ ಮಾಡಿ” ಅಭಿಯಾನದಡಿ ಮತದಾನ ಮಾಡಿದ ಗುರುತು ತೋರಿಸಿದವರಿಗೆ ಬೆಣ್ಣೆ ದೋಸೆ, ಲಡ್ಡು ಮತ್ತು ಜ್ಯೂಸ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ.