ಆನೆ ದಾಳಿ: ಮರ ಏರಿ ಕುಳಿತ ಸಿಬ್ಬಂದಿ

ಆನೆ ದಾಳಿ: ಮರ ಏರಿ ಕುಳಿತ ಸಿಬ್ಬಂದಿ

ಮಡಿಕೇರಿ, ಜ.8 : ಕಾಫಿ ತೋಟದಲ್ಲಿ ಬೀಡುಬಿಟ್ಟಿದ್ದ ಕಾಡಾನೆಗಳನ್ನು ಹಿಮ್ಮೆಟ್ಟಿಸುವ ವೇಳೆ ಮದವೇರಿದ ಗಜಗಳು ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ತಿರುಗಿಬಿದ್ದಿದ್ದು, ಮರವನ್ನೇರಿ ತಮ್ಮ ಪ್ರಾಣ ರಕ್ಷಿಸಿಕೊಂಡಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಕರಡಿಗೂಡು ಗ್ರಾಮದಲ್ಲಿ ನಡೆದಿದೆ.

ಕಳೆದ ಎರಡು ದಿನಗಳಿಂದ ಇಂಜಿಲಗೆರೆ, ಕರಡಿಗೂಡು, ಪುಲಿಯೇರಿ ಗ್ರಾಮದ ಕಾಫಿ ತೋಟಗಳಲ್ಲಿ ಸುಮಾರು 10ಕ್ಕೂ ಹೆಚ್ಚು ಕಾಡಾನೆಗಳು ಬೀಡುಬಿಟ್ಟಿದ್ದು, ಬೆಳೆಗಳನ್ನು ನಾಶ ಮಾಡಿದ್ದವು. ಆನೆಗಳನ್ನು ಕಾಡಿಗೆ ಅಟ್ಟುವಂತೆ ಗ್ರಾಮಸ್ಥರು ಮನವಿ ಮಾಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ಕೈಗೊಂಡಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos