ಬೆಂಗಳೂರು: ತುರ್ತು ಭೂ ಸ್ಪರ್ಶ ಮಾಡಿದ ಹೆಲಿಕಾಪ್ಟರ್

ಬೆಂಗಳೂರು: ತುರ್ತು ಭೂ ಸ್ಪರ್ಶ ಮಾಡಿದ ಹೆಲಿಕಾಪ್ಟರ್

ಬೆಂಗಳೂರು: ಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದ ನಗರದ ಕನಕರಪುರ ರಸ್ತೆಯ ಕಗ್ಗಲೀಪುರದ ಬಳಿ ತುರ್ತು ಭೂ ಸ್ಪರ್ಶ ಮಾಡಿದೆ ಎಂದು ತಿಳಿದುಬಂದಿದೆ.
ಮಂಗಳವಾರ ಮಧ್ಯಾಹ್ನ ಬನ್ನೇರುಘಟ್ಟ ಅರಣ್ಯದ ಸರ್ವೇ ಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನೆಯಲ್ಲಿ ರಮೇಶ್ ಮತ್ತು ಪೂನ್ ಇಬ್ಬರು ಪೈಲೆಟ್‌ಗಳು ಅಪಾಯದಿಂದ ಪಾರಾಗಿದ್ದಾರೆ. ಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ ಎಚ್ಚೆತ್ತುಕೊಂಡು ಕಗ್ಗಲೀಪುರದ ಖಾಲಿ ಜಮೀನೊಂದರಲ್ಲಿ ತುರ್ತು ಭೂ ಸ್ಪರ್ಶ ಮಾಡಲಾಗಿದೆ ಎಂದು ವರದಿಯಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸೇನಾ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ. ಎಂದಿನಂತೆ ಹೆಲಿಕಾಪ್ಟರ್ ದೈನಂದಿನ ತರಬೇತಿ ಹಾರಾಟದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಅಲ್ಲದೆ, ಶುಕ್ರವಾರ (ಫೆ.1) ಮಿರಾಜ್-2000 ಯುದ್ಧ ವಿಮಾನ ಎಚ್‌ಎಎಲ್ ವಿಮಾನ ನಿಲ್ದಾಣದ ಬಳಿ ಪತನಗೊಂಡು ಇಬ್ಬರು ಪೈಲೆಟ್‌ಗಳು ಮೃತಪಟ್ಟಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos