ನೌಕರರ ಪದೋನ್ನತಿ ಪರಿಷ್ಕರಣೆ, ಸಿಎಂ ಸೂಚನೆ

ನೌಕರರ ಪದೋನ್ನತಿ ಪರಿಷ್ಕರಣೆ, ಸಿಎಂ ಸೂಚನೆ

ಬೆಂಗಳೂರು, ಸೆ.18: ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳ ತಿದ್ದುಪಡಿ ಅಥವಾ ಪರಿಷ್ಕರಣೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎನ್.ವಿಜಯಭಾಸ್ಕರ್ ಅವರಿಗೆ ಮುಖ್ಯಮಂತ್ರಿ ಆದೇಶಿಸಿದ್ದಾರೆ.

ಸರ್ಕಾರದ ಹಲವು ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸದಿರುವುದರಿಂದ ನೌಕರರು ಪದೋನ್ನತಿಯಿಂದ ವಂಚಿತರಾಗುತ್ತಿದ್ದಾರೆ.

ಪ್ರತಿ ಮೂರು ವರ್ಷಗಳಿಗೊಮ್ಮೆ ನೇಮಕಾತಿ ನಿಯಮಗಳಿಗೆ ತಿದ್ದುಪಡಿ ಹೊರಡಿಸುವಂತೆ 2019ರಲ್ಲೇ ಸುತ್ತೋಲೆ ಹೊರಡಿಸಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಗಮನಸೆಳೆದಿತ್ತು.

ಇಲಾಖೆಗಳಲ್ಲಿ ವೃಂದ ಮತ್ತು ನೇಮಕಾತಿ ನಿಯಮಗಳನ್ನು ರೂಪಿಸುವ ಮೂಲಕ ನೌಕರರಿಗೆ ಅನುಕೂಲ ಮಾಡಿಕೊಡುವಂತೆ ನೌಕರರ ಸಂಘ ಸಲ್ಲಿಸಿದ ಮನವಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಆದೇಶಿಸಿದ್ದಾರೆ.

 

 

ಫ್ರೆಶ್ ನ್ಯೂಸ್

Latest Posts

Featured Videos