ಬೆಂಗಳೂರು: ಲೋಕಸಭಾ ಚುನಾವಣೆ ಟಿಕೆಟ್ ಸಿಗದೇ ಈಶ್ವರಪ್ಪನವರು ಶಿವಮೊಗ್ಗದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಗನಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಯಡಿಯೂರಪ್ಪನವರ ಕುಟುಂಬದ ವಿರುದ್ಧ ಕೊತಕೊತ ಕುದಿಯುತ್ತಿರುವ ಹಿರಿಯ ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಈಗ ಮತ್ತಷ್ಟು ಗರಂ ಆಗಿದ್ದಾರೆ. ದೆಹಲಿಗೆ ಬರುವಂತೆ ಸೂಚಿಸಿದ್ದ
ಬೆಂಗಳೂರಿನಲ್ಲಿ ಬಿಜೆಪಿ ನಾಯಕರ ಜೊತೆಗೆ ಸಭೆ, ಚನ್ನಪಟ್ಟಣದಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲು ಅಮಿತ್ ಶಾ, ಬೆಂಗಳೂರಿಗೆ ಆಗಮಿಸಿದ್ದರು.
ಆ ವೇಳೆ, ಈಶ್ವರಪ್ಪನವರ ಜೊತೆಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದರು. ಈಶ್ವರಪ್ಪನವರ ಸಿಟ್ಟು ತಣ್ಣಗಾಗದ ಹಿನ್ನೆಲೆಯಲ್ಲಿ ಅವರನ್ನು ದೆಹಲಿಗೆ ಬರುವಂತೆ ಸೂಚಿಸಿದ್ದರು. ಸೂಚನೆಯ ಮೇರೆ ಈಶ್ವರಪ್ಪ ನಿನ್ನೆ ಬೆಳಗ್ಗೆ ದೆಹಲಿಗೆ ಪ್ರಯಾಣಿಸಿದ್ದರು. ಆದರೆ, ಇಡೀ ದಿನ ಕಾದರೂ ಅಮಿತ್ ಶಾ ದರ್ಶನ ಸಿಗದೇ ರಾಜ್ಯಕ್ಕೆ ಈಶ್ವರಪ್ಪ ವಾಪಸ್ಸಾಗಿದ್ದಾರೆ.