ಬಾಗಲಕೋಟೆ, ಜೂ. 29 : ಪ್ರಧಾನಿ ನರೇಂದ್ರ ಮೋದಿ ಅವರೂ ಜನರ ತೆರಿಗೆ ಹಣದಲ್ಲೇ ಯೋಜನೆಗಳನ್ನು ನೀಡುತ್ತಿದ್ದಾರೆ,ಅವರ ಸ್ವಂತ ಹಣದಲ್ಲಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.
ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಈಶ್ವರಪ್ಪ ಮನುಷ್ಯನೇ ಅಲ್ಲ. ನಾಗರಿಕತೆ, ಸಂಸ್ಕೃತಿಯೇ ಇಲ್ಲ. ಈಶ್ವರಪ್ಪ ನಾಟ್ ಎಟ್ ಆಲ್ ಹ್ಯೂಮನ್ ಬಿಯಿಂಗ್ ಎಂದು ಕಿಡಿ ಕಾರಿದರು. ಯಡಿಯೂರಪ್ಪನವರೂ ಮುಖ್ಯಮಂತ್ರಿ ಆಗಲ್ಲ.ಕನಸು ಕಾಣುತ್ತಾ ಕುಳಿತಿರಬೇಕು ಎಂದರು.