ಕಲಬುರಗಿ, ಜ. 11 : ಪೌರತ್ವ ಕಾಯ್ದೆ ಬೆಂಬಲಿಸಿ ನಗರದಲ್ಲಿ ಕಲಬುರಗಿ ನಾಗರಿಕ ಸಮಿತಿ ವತಿಯಿಂದ ಬೃಹತ್ ತಿರಂಗ ಧ್ವಜದ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ತಿರಂಗ ಧ್ವಜ ಎಲ್ಲೆಡೆ ರಾರಾಜಿಸುತ್ತಿದೆ.
ನಗರೇಶ್ವರ ಶಾಲೆಯಿಂದ ಮೆರವಣಿಗೆ ಆರಂಭವಾಗಿದೆ. ವಿವಿಧ ಮಠಾಧೀಶರು, ಬಿಜೆಪಿ ಮುಖಂಡರು, ಸಾವಿರಾರು ಜನರು ಪಾಲ್ಗೊಂಡಿದ್ದಾರೆ.
ತಿರಂಗ ಹಿಡಿದು ಪೌರತ್ವ ಕಾಯ್ದೆ, ಪ್ರಧಾನಿ ಮೋದಿ ಪರ ಘೋಷಣೆ ಕೂಗುತ್ತಿದ್ದಾರೆ.