ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ

ಬೆಳಗಾವಿ , ಡಿ. 08 : ಬಿಜೆಪಿ ಮತ್ತು ಜೆಡಿಎಸ್ಗೆ ನನ್ನನ್ನು ಕಂಡರೆ ಭಯ. ಅದಕ್ಕೆ ಪದೇ ಪದೇ ನನ್ನ ಹೆಸರನ್ನು ಪ್ರಸ್ತಾಪ ಮಾಡುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಥೆ ಮುಗಿಯಿತು ಎಂಬ ಈಶ್ವರಪ್ಪ ಮತ್ತು ಜಗದೀಶ್ ಶೆಟ್ಟರ್ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು. “ಈಶ್ವರಪ್ಪ, ಜಗದೀಶ್ ಶೆಟ್ಟರ್ ಭ್ರಮೆಯಲ್ಲಿದ್ದಾರೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇನೆ ಅಂತಾರೆ. ಅದೂ ಸಹ ಭ್ರಮೆಯೇ. ಕಾಂಗ್ರೆಸ್ ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ,” ಎಂದು ಹೇಳಿದರು.

ಇದೇ ವೇಳೆ, ಬಿಜೆಪಿ ಮತ್ತು ಜೆಡಿಎಸ್ಗೆ ನನ್ನ ಕಂಡರೆ ಭಯ. ಅದಕ್ಕೆ ಪದೇ ಪದೇ ನನ್ನ ಹೆಸರು ಪ್ರಸ್ತಾಪಿಸುತ್ತಾರೆ ಎಂದು ಲೇವಡಿ ಮಾಡಿದರು. ಚುನಾವಣೆ ಫಲಿತಾಂಶ ಸಮೀಕ್ಷೆಯನ್ನು ನಾನು ನಂಬಲ್ಲ. ಮಹಾರಾಷ್ಟ್ರ, ಹರಿಯಾಣದಲ್ಲಿ ಏನಾಯ್ತು? ಅಂದಾಜಿನ ಮೇಲೆ ಸಮೀಕ್ಷೆ ಮಾಡಿರುತ್ತಾರೆ. ಅದಕ್ಕೆ ನಾನು ನಂಬಲ್ಲ ಎಂದರು.

ಫ್ರೆಶ್ ನ್ಯೂಸ್

Latest Posts

Featured Videos