ಕಬ್ಬಿನ ಹೊಲದಲ್ಲಿ ಚಿರತೆ ಮರಿಗಳ ಪ್ರತ್ಯಕ್ಷ

ಕಬ್ಬಿನ ಹೊಲದಲ್ಲಿ ಚಿರತೆ ಮರಿಗಳ ಪ್ರತ್ಯಕ್ಷ

ಚಾಮರಾಜನಗರ, ಡಿ. 27: ಗ್ರಾಮದ ತಂಗರಾಜು ಅವರು ಜಮೀನಿನಲ್ಲಿ ಚಿರತೆಯೊಂದು ಮರಿ ಹಾಕಿರುವುದು ಇಂದು ಕಟಾವು ಮಾಡುತ್ತಿರುವಾಗ ಬೆಳಕಿಗೆ ಬಂದಿದೆ. ಕಬ್ಬು ಕಟಾವು ಮಾಡುವ ವೇಳೆ ಕೆಲಸ ಮಾಡುತ್ತಿದ್ದ ಓರ್ವನ ಕಾಲನ್ನು ಚಿರತೆ ಮರಿಯೊಂದು ಹಿಡಿದು ದಂಗು ಬೀಳಿಸಿದೆ. ಬಳಿಕ ಎಚ್ಚೆತ್ತ ಕೆಲಸಗಾರರು ತಾಯಿ ಇಲ್ಲದಿದ್ದನ್ನು ಖಚಿತ ಪಡಿಸಿಕೊಂಡು ಸತ್ಯಮಂಗಲಂ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಚಿರತೆ ಮರಿಗಳ ಚಿನ್ನಾಟಕ್ಕೆ ರೈತರು ಬೆಸ್ತು ಬಿದ್ದಿರುವ ಘಟನೆ ಗಡಿಭಾಗವಾದ ತಾಳವಾಡಿಯ ದೊಡ್ಡಮುತ್ತಿನಕೆರೆಯಲ್ಲಿ ನಡೆದಿದೆ.

ಎರಡು ಚಿರತೆ ಮರಿಗಳನ್ನು ಇದ್ದ ಸ್ಥಳದಲ್ಲೇ ಇರಿಸಿದ್ದು, ರಾತ್ರಿ ವೇಳೆ ತಾಯಿ ಚಿರತೆ ಬಂದು ಹೊತ್ತೊಯ್ಯಬಹುದು ಎಂದು ಅರಣ್ಯ ಇಲಾಖೆ ಸಿಬ್ಬಂದಿ ರೈತರಿಗೆ ತಿಳಿಸಿದ್ದಾರೆ. ಅವುಗಳ ಚಲನವಲನ ಗಮನಿಸಲು 3 ಕ್ಯಾಮೆರಾಗಳನ್ನು ಕೂಡ ಅರಣ್ಯ ಇಲಾಖೆ, ಸ್ಥಳದಲ್ಲಿ ಅಳವಡಿಸಿದೆ.

 

 

ಫ್ರೆಶ್ ನ್ಯೂಸ್

Latest Posts

Featured Videos