ನಿಖಿಲ್ ಸುಮಲತಾಗೆ ಫೇಸ್ಬುಕ್ ನಲ್ಲಿ ಮನವಿ

ನಿಖಿಲ್ ಸುಮಲತಾಗೆ ಫೇಸ್ಬುಕ್ ನಲ್ಲಿ   ಮನವಿ

ಬೆಂಗಳೂರ,  ಮೇ. 31, ನ್ಯೂಸ್ ಎಕ್ಸ್ ಪ್ರೆಸ್ : ಮಂಡ್ಯದ ನೂತನ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಪರಾಜಿತ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸುವುದರ ಜತೆಗೆ ಫೇಸ್​ಬುಕ್​ ಮೂಲಕ ಮನವಿಯೊಂದನ್ನು ಸಹ ಮಾಡಿಕೊಂಡಿದ್ದಾರೆ.

ಜೆಡಿಎಸ್ ಹಾಗೂ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿರುವ ನಿಖಿಲ್ ಕುಮಾರಸ್ವಾಮಿ, ಸುಮಲತಾಗೆ ಏನು ಮನವಿ ಮಾಡಿದ್ದಾರೆ..? “ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ರಾಜ್ಯದ ಸಂಸತ್ ಸದಸ್ಯರಿಗೆ ನನ್ನ ಅಭಿನಂದನೆಗಳು. ರಾಜ್ಯದ ಹಿತವನ್ನು ಕಾಪಾಡುವ ಜೊತೆಗೆ, ವಿಶೇಷವಾಗಿ ನಮ್ಮ ರೈತರ ಹಾಗು ಬಡವರ ಪರವಾಗಿ, ಅವರ ಏಳಿಗೆಗಾಗಿ, ನಿಮ್ಮ ಪ್ರಯತ್ನಗಳು ಇರಲಿವೆ ಎಂದು ಎಲ್ಲ ಕನ್ನಡಿಗರಂತೆ, ನಾನೂ ಕೂಡ ನಿರೀಕ್ಷಿಸುತ್ತಿದ್ದೇನೆ.

ಹಾಗೆಯೇ, ಮಂಡ್ಯದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರಾದ ಶ್ರೀಮತಿ ಸುಮಲತಾ ಅಂಬರೀಷ್ ಅವರಿಗೆ ನನ್ನ ಅಭಿನಂದನೆಗಳು. ಕೇಂದ್ರ ಸರ್ಕಾರದಿಂದ ಅಗತ್ಯ ಬೆಂಬಲ, ನೆರವು ಸಿಗದೆ ನಮ್ಮ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ವಿಶೇಷ ನೆರವಿಗಾಗಿ ಬೇಡಿಕೆ ಹೊತ್ತು ರಾಜ್ಯಸರ್ಕಾರ ಕೇಂದ್ರಕ್ಕೆ ನಿಯೋಗಗಳನ್ನು ಕರೆದೊಯ್ದು, ಬರಿಗೈಯಲ್ಲಿ ಮರಳುತ್ತಿರುವುದನ್ನು ಕೂಡ ರಾಜ್ಯದ ಜನ ನೋಡುತ್ತಲೇ ಬಂದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos