ಬೆಂಗಳೂರು: ಕೊರೋನಾ ಹಿನ್ನೆಲೆ ಆಸ್ಪತ್ರೆಗೆ ಬೇಕಿರುವ ಎಲ್ಲ ಸೌಲಭ್ಯ ನೀಡಲು ಸರ್ಕಾರ ರೆಡಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದರು.
ಮಂಗಳವಾರ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ, ಅಧಿಕಾರಿಗಳು ಹಾಗೂ ವೈದ್ಯರೊಂದಿಗೆ ಸಮಾಲೋಚನೆ ನಡೆಸಿ, ಆಸ್ಪತ್ರೆಗೆ ಸಂಬAಧಿಸಿದAತೆ ನಕಾರಾತ್ಮಕ ವರದಿಗಳು ಬರುತ್ತಿವೆ. ರೋಗಿಗಳಿಗೆ ಯಾವುದೆ ಲೋಪವಾಗದಂತೆ ಚಿಕಿತ್ಸೆ ನೀಡಬೇಕೆಂದು ತಾಕೀತು ಮಾಡಿದರು.
ಚಿಕಿತ್ಸಾ ವಿಧಿ-ವಿಧಾನಗಳು, ಡಯಾಲಿಸಿಸ್ ಸೌಲಭ್ಯ ಪಡೆಯುತ್ತಿರುವವರ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಮಾಹಿತಿ ಪ್ರತಿ ದಿನವೂ ಕೊಡಬೇಕು. ಗರ್ಭಿಣಿಯರ ವಿವರಗಳನ್ನು ನೀಡಬೇಕಂದು ವಿಡಿಯೋ ಸಂವಾದದ ಮೂಲಕ ಐಸಿಯು, ವಾರ್ಡ್ಗಳಲ್ಲಿ ರೋಗಿಗಳ ಜತೆ ಸಮಾಲೋಚನೆ ನಡೆಸಿದರು.