ಬಾಗಲಕೋಟೆ, ಅ. 22: ರಾಜ್ಯದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಲಪ್ರಭಾ ನದಿಯು ಭಾರೀ ಪ್ರಮಾಣದಲ್ಲಿ ತುಂಬಿ ಹರಿಯುತ್ತಿರುವುದರಿಂದ ನೀರಲ್ಲಿ ಕೊಚ್ಚಿ ಹೋಗಿ ರೈತ ಸಾವನ್ನಪ್ಪಿರುವ ಘಟನೆ ಬದಾಮಿ ತಾಲೂಕಿನ ಶಿರಬಡಗಿ ಗ್ರಾಮದಲ್ಲಿ ನಡೆದಿದೆ. ರಾಮಪ್ಪ ಮಲ್ಲಪ್ಪ ಹೊನ್ನಣ್ಣವರ(50) ಮೃತ ದುರ್ದೈವಿ.
ಮೃತ ರಾಮಪ್ಪ ದೇವಸ್ಥಾನಕ್ಕೆ ಹೋಗಿ ಬರುವ ವೇಳೆ ಈ ಘಟನೆ ಸಂಭವಿಸಿದೆ. ಬದಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇನ್ನು ಮಲಪ್ರಭಾ ನದಿ ನದಿ ತುಂಬಿ ಹರಿಯುತ್ತಿದ್ದು, ಬದಾಮಿ ಹಾಗೂ ಗದಗ ಸಂಪರ್ಕಿಸುವ ಚೊಳಚಗುಡ್ಡ ರಸ್ತೆ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆ ಹಿನ್ನೆಲೆ ವಾಹನಗಳು ಸೇತುವೆಯಿಂದಾಚೆಗೆ ಸಾಲುಗಟ್ಟಿ ನಿಂತಿವೆ.