ಇಂದು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ!

ಇಂದು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಬೃಹತ್ ಪ್ರತಿಭಟನೆ!

ಬೆಂಗಳೂರು: ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ಹಾಗೂ ರೈತ ಸಮೂಹದಿಂದ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರ ಸಂಪೂರ್ಣ ಸಾಲಮನ್ನಾ ಸೇರಿದಂತೆ, ಇತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಗಮನ ಸೆಳೆಯಲು ಕಬ್ಬು ಬೆಳೆಗಾರ ಸಂಘ ಸೇರಿದಂತೆ ರಾಜ್ಯ ರೈತ ಒಕ್ಕೂಟ ಬೆಂಗಳೂರು ಚಲೋ ಬಳಿ ಹಮ್ಮಿಕೊಂಡಿದ್ದಾರೆ.

ಆಕಸ್ಮಿಕ ಅಪಘಾತ ಸಾವು ಆತ್ಮಹತ್ಯೆಗೆ ಒಳಗಾದ ಕುಟುಂಬಕ್ಕೆ 5 ಲಕ್ಷ ಪರಿಹಾರ ಸಿಗುತ್ತದೆ ಇದೇ ರೀತಿ ರಾಜ್ಯದಲ್ಲಿ ಜಾರಿಗೆ ತರಬೇಕು ರೈತರಿಗೆ ತಮಿಳ್ನಾಡಿಗೆ ಕಾವೇರಿ ನೀರು ಹರಿಸಿ ಅಚ್ಚುಕಟ್ಟು ರೈತರಿಗೆ ವಂಚನೆ ಮಾಡಿರುವ ಸರ್ಕಾರ ರೈತರಿಗೆ ಕೂಡಲೇ ಎಕ್ಕರೆಗೆ 25,000 ರೂ ಪರಿಹಾರ ನೀಡಬೇಕು.

ರೈತರು ಬೆಳೆದ ಎಲ್ಲಾ ಪೌಷ್ಠಿಕ ಸಿರಿಧಾನ್ಯಗಳನ್ನು ಉತ್ಪಾದನಾ ವೆಚ್ಚಕ್ಕೆ ಬೆಂಬಲ ಬೆಲೆ ಹೆಚ್ಚುವರಿ ಬೆಲೆ ನಿಗದಿ ಮಾಡಿ ಸರ್ಕಾರವೇ ಕಡ್ಡಾಯವಾಗಿ ಖರೀದಿಸುವ ವ್ಯವಸ್ಥೆ ಜಾರಿಗೆ ಬರಬೇಕು. ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರೈತರ ಸಾಲ ಮನ್ನಾ ಮಾಡಿರುವ ರೀತಿ ರಾಜ್ಯದಲ್ಲಿಯೂ ಸಾಲ ಮನ್ನಾ ಆಗಬೇಕು ಎಂಬ ಬೇಡಿಕೆ ಸೇರಿ ವಿವಿಧ ಬೇಡಿಕೆಗಳನ್ನು ಇಟ್ಟುಕೊಂಡು ಎಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos