ಬೆಂಗಳೂರು, ಅ. 25: ಮಾಜಿ ಸಚಿವ ಡಿ.ಕೆ ಶಿವಕುಮಾರ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. 6 ವರ್ಷದ ಹಿಂದೆಯೇ ಸಲ್ಲಿಸಲಾಗಿದ್ದ ಪಿಎಎಲ್ ಈಗ ಮತ್ತೆ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಂದಿದೆ. ಈ ಕೇಸ್ ಕುರಿತಾದ ಮಹತ್ವದ ದಾಖಲೆಗಳನ್ನು ಸರ್ಕಾರ ಈಗಾಗಲೇ ನ.30ರಂದು ನ್ಯಾಯಲಯಕ್ಕೆ ಸಲ್ಲಿಸಿದೆ. ಹಾಗಾಗಿ ಕಾಂಗ್ರೆಸ್ ಕಟ್ಟಾಳು ಹಳೆ ಪ್ರಕರಣಕ್ಕೆ ಮರು ಜೀವ ಬಂದಿದ್ದು, ಮತ್ತೆ ಡಿಕೆಶಿಗೆ ಬಂಧನದ ಭೀತಿ ಶುರುವಾಗಿದೆ. ಇತ್ತ ಡಿಕೆಶಿ ವಿರುದ್ಧ ಕೇಸ್ ದಾಖಲಿಸಿರುವ ದೂರುದಾರರು ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದಾರೆ. ಇಲ್ಲದೇ ಹೋದಲ್ಲಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಬೇಕೆಂದು ಎಂದು ದೂರುದಾರರಾದ ಸಾಮಾಜಿಕ ಹೋರಾಟಗಾರ ಎ.ಸಿ ಶಿವರಾಜ್ ಹಾಗೂ ರೈತ ಮುಖಂಡ ಬಿ.ಸಿ. ನಾರಾಯಣಸ್ವಾಮಿ