ಇಂದು ಬಿಜೆಪಿ ಕಚೇರಿ ಎದುರು ಉಗ್ರ ಪ್ರತಿಭಟನೆ!

ಇಂದು ಬಿಜೆಪಿ ಕಚೇರಿ ಎದುರು ಉಗ್ರ ಪ್ರತಿಭಟನೆ!

ಬೆಂಗಳೂರು, ಆ. 31: ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದವರಿಗೆ ಡಿಸಿಎಂ ಪಟ್ಟ ಕೊಟ್ಟಿರುವುದು ಖಂಡಿಸಿ ಇಂದು ರಾಜಧಾನಿಯ ಮಲ್ಲೇಶ್ವರದಲ್ಲಿರುವ ಬಿಜೆಪಿ ಪಕ್ಷದ ಕೇಂದ್ರ ಕಚೇರಿ ಎದುರು ಜಮಾವಣೆಗೊಂಡ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೇ ಧರಣಿ ಕುಳಿತ ಮಹಿಳೆಯರು ಲಕ್ಷ್ಮಣ ಸವದಿ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿರುವ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, “ಸದನದಲ್ಲಿ ನೀಲಿ ಚಿತ್ರ ವೀಕ್ಷಿಸಿದವರಿಗೆ ಸಚಿವ ಸ್ಥಾನದ ಜೊತೆಗೆ ಡಿಸಿಎಂ ಸ್ಥಾನವನ್ನೂ ನೀಡಿರುವುದು ಮಹಿಳೆಯರಿಗೆ ಮಾಡಿದ ಅಪಮಾನ. ಬಿಜೆಪಿ ಪಕ್ಷದಲ್ಲೂ ಶೋಭಾ ಕರಂದ್ಲಾಜೆ ಸೇರಿ ಹಲವಾರು ಮಹಿಳೆಯರಿದ್ದಾರೆ ಅವರಿಗೆ ಮಾಡಿದ ಅವಮಾನ. ಇವನ್ನೆಲ್ಲಾ ನೋಡಿ ಶೋಭಾ ಕರಂದ್ಲಾಜೆ ಸುಮ್ಮನಿರಬಹುದು. ಆದರೆ, ನಾವು ಸುಮ್ಮನಿರಲು ಸಾಧ್ಯವಿಲ್ಲ. ಕೂಡಲೇ ಅವರಿಗೆ ನೀಡಿರುವ ಹುದ್ದೆಯನ್ನು ಹಿಂಪಡೆಯಬೇಕು” ಎಂದು ಒತ್ತಾಯಿಸಿದರು.

ಈ ವೇಳೆ ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ನೀಡಲಾಗಿತ್ತು. ಕೊನೆಗೆ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸುವ ಮೂಲಕ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದರು.

 

ಫ್ರೆಶ್ ನ್ಯೂಸ್

Latest Posts

Featured Videos