ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನ ಕೂಡಿ ಬಂತು!?

ಕೊನೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನ ಕೂಡಿ ಬಂತು!?

ಬೆಂಗಳೂರು, ಜ. 27: ರಾಜ್ಯ ಬಿಜೆಪಿ ಸರಕಾರದಲ್ಲಿ ಖಾಲಿ ಇರುವ ಸಚಿವ ಸ್ಥಾನಗಳನ್ನು ತುಂಬುವುದಕ್ಕೆ ಸಂಬಂಧಪಟ್ಟಂತೆ ದಿನದಿಂದ ದಿನಕ್ಕೆ ಆಕಾಂಕ್ಷಿಗಳ ಹೆಸರುಗಳು ಹೆಚ್ಚಾಗುತ್ತಿದೆ. ಒಂದು ಕಡೆ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟು ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಇನ್ನೂ ಬಿಜೆಪಿ ಹೈಕಮಾಂಡ್ ಪಟ್ಟಿಯನ್ನು ಅಂತಿಮಗೊಳಿಸಿಲ್ಲ.

ಈ ನಡುವೆ ಜ. 29 ಅಥಾವ ಜ 30ರಂದು ರಾಜ್ಯ ಸಚಿವ ಸಂಪುಟದ ವಿಸ್ತರಣೆಯಾಗಲಿದೆ ಎನ್ನಲಾಗುತ್ತಿದೆ. ಇನ್ನು ಸಚಿವ ಸಂಪುಟದಲ್ಲಿ ಯಾರೆಲ್ಲ ಸೇರಿಸಿಕೊಳ್ಳಬಹುದು ಎನ್ನುವು ವಿಷಯಕ್ಕೆ ಸಂಬಂಧಪಟ್ಟಂತೆ ಸಿಎಂ ನಾಳೆ ಸಂಜೆಯೊಳಗೆ ದೆಹಲಿ ಹೈಕಮಾಂಡ್ಗೆ ಕರೆ ಮಾಡಿ ಎಲ್ಲಾ ಮಾಹಿತಿಗಳನ್ನು ವರಿಷ್ಠರಿಗೆ ಮನದಟ್ಟು ಮಾಡಿಕೊಟ್ಟ ಬಳಿಕ ಎಲ್ಲವೂ ನಡೆಯಲಿದೆ. ಇನ್ನು ಈ ನಡುವೆ ಇಂದು ಎರಡು ಬಾರಿ ಸಿಎಂ ಬಿಎಸ್ವೈ ಅವರು ಈ ತಿಂಗಳ ಅಂತ್ಯದ ಒಳಗೆ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎನ್ನಲಾಗಿದೆ. ಹೀಗಾಗಿ ಸಚಿವರಾಗಬೇಕು ಅಂಥ ಕನಸು ಕಂಡಿದ್ದ ಶಾಸಕರ ಆಸೆ ಇನ್ನಷ್ಟು ಹೆಚ್ಚಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos