ಬೆಂಗಳೂರು: ಸರಗಳ್ಳರ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಸರಗಳ್ಳರ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು, ಮಾ, 26, ನ್ಯೂಸ್ ಎಕ್ಸ್ ಪ್ರೆಸ್:  ಇಬ್ಬರು ಸರಗಳ್ಳರ ಮೇಲೆ ಸೋಲದೇವನಹಳ್ಳಿ ಠಾಣೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಾಬರಿ, ಸರಗಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಮಹಜರು ಮಾಡಲು ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.

ಚಂದ್ರಶೇಖರ್ ಅಲಿಯಾಸ್ ಚನ್ನು ಮತ್ತು ದೇವರಾಜ್ ಅವರಿಗೆ ಗುಂಡೇಟು ಬಿದ್ದಿದೆ. ಅವರನ್ನು ಮಹಜರು ಮಾಡಲು ಕರೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ.

ಶರಣಾಗಲು ಪೊಲೀಸರು ಸೂಚನೆ ನೀಡಿದ್ದು, ಹಲ್ಲೆ ಮಾಡಿ ಪರಾರಿಯಾಗಲು ಮುಂದಾದಾಗ ಆತ್ಮರಕ್ಷಣೆಗೆ ಫೈರಿಂಗ್ ಮಾಡಲಾಗಿದೆ. ಕಾಲಿಗೆ ಗುಂಡೇಟು ಬಿದ್ದು ಗಾಯಗೊಂಡಿರುವ ಇಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos