ಬೆಂಗಳೂರು: ಈ ಬಾರಿ ಮಳೆ ಇಲ್ಲದೇ ಬರಗಾಲದಿಂದಾಗಿ ಕುಡಿಯುವ ನೀರು, ಬೆಳೆಗಳಿಗೆ ನೀರುಣಿಸಲು ಜನ, ರೈತರು ಸಂಕಷ್ಟದಲ್ಲಿದ್ದು, ಅರ್ಧ ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಯಿಂದ ಸಂಭ್ರಮಿಸಿದ್ದಾರೆ. ಮೊದಲ ಮಳೆ ಹನಿಗಳು ಬೀಳುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಬಂದು ಮಳೆಯಲ್ಲಿ ನೆನೆದು ಸಂತಸ ವ್ಯಕ್ತಪಡಿಸಿದ್ದಾರೆ. ಮಳೆ ಹನಿ ಬಿದ್ದಾಗ ಮಣ್ಣಿನ ವಾಸನೆಯಿಂದ ಸಂತಸಪಟ್ಟಿದ್ದಾರೆ.
ನಿನ್ನೆ ರಾಜ್ಯದ ಹಲವೆಡೆ ಮಳೆಯಾಗಿದೆ ಚಿಕ್ಕಮಂಗಳೂರು ತಾಲೂಕಿನ ಭದ್ರ ಅಭಯಾರಣ್ಯ ಪ್ರದೇಶದ ಮುತ್ತೋಡಿ ವಲಯದಲ್ಲಿ ನೆನ್ನೆ ರಾತ್ರಿ ವರ್ಷದ ಮೊದಲ ಮಳೆಯಾಗಿದ್ದು ಜನರು ಸಂತಸ ಗೊಂಡಿದ್ದಾರೆ.
ಇನ್ನು ಕೊಡಗು ಜಿಲ್ಲೆ ಹಲಗೆಡೆ ನಿನ್ನೆ ಸಾಧಾರಣ ಮಳೆಯಾಗಿದ್ದೆ ಮೂರ್ನಾಡು ವ್ಯಾಪ್ತಿಯ ಕಿಗ್ಗಾಲು ಭಾಗದಲ್ಲಿ ಸಾಧಾರಣ ಮಳೆಯಾಗಿದೆ ಜನರಲ್ಲಿ ಮಳೆಯಿಂದ ನಿರೀಕ್ಷೆಗಳು ಗರಿಗೆದರಿವೆ. ಜಿಲ್ಲೆಯ ಹಲವು ಕಡೆ ತುಂತುರು ಮಳೆಯಾಗಿದೆ, ಮಡಿಕೇರಿ ಸೇರಿ ಹಲವೆಡೆ ದಟ್ಟ ಮೋಡ ಕವಿತ ವಾತಾವರಣ ಕಂಡುಬಂದಿದೆ.