ದೆಹಲಿಯಲ್ಲಿ ‘ಅಂಗಡಿ’ ತೆರೆದ ‘ಸುರೇಶ’

ದೆಹಲಿಯಲ್ಲಿ ‘ಅಂಗಡಿ’ ತೆರೆದ ‘ಸುರೇಶ’

ಬೆಂಗಳೂರು, ಮೇ. 30, ನ್ಯೂಸ್‍ ಎಕ್ಸ್ ಪ್ರೆಸ್‍: ಮೋದಿ ಸಂಪುಟದಲ್ಲಿ ಡಿವಿಎಸ್​, ಸುರೇಶ್​ ಅಂಗಡಿ, ಪ್ರಲ್ಹಾದ್ ಜೋಶಿಗೆ ಅವಕಾಶ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಎನ್​ಡಿಎ ಸರ್ಕಾರದಲ್ಲಿ ರಾಜ್ಯದ ಮೂವರು ಸಂಸದರಿಗೆ ಸಚಿವ ಸ್ಥಾನ ದೊರೆತಿದೆ. ಸುರೇಶ್​​ ಅಂಗಡಿ ಹಾಗೂ ಸಂಸದ ಪ್ರಲ್ಹಾದ್ ಜೋಶಿ ಅವರು ಸತತ ನಾಲ್ಕನೇ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದು, ಮೊದಲ ಬಾರಿಗೆ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ಬೆಂ.ಉತ್ತರ ಸಂಸದ ಡಿ.ವಿ.ಸದಾನಂದಗೌಡ, ಬೆಳಗಾವಿ ಸಂಸದ ಸುರೇಶ್​​ ಅಂಗಡಿ ಹಾಗೂ ಧಾರವಾಡ ಸಂಸದ ಪ್ರಲ್ಹಾದ್ ಜೋಶಿ ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಮೋದಿ ಭೇಟಿಯಾಗಲಿರುವ ಮೂವರು ಸಂಜೆ 7 ಗಂಟೆಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos