ಬೆಂಗಳೂರು, ಡಿ. 14: ಮಹತ್ವದ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಕೇಂದ್ರ ಸರ್ಕಾರಕ್ಕೆ ಹಲವೆಡೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದ್ದು, ರಾಜ್ಯದಲ್ಲೂ ಕೂಡ ಪ್ರತಿಭಟನೆ ಭುಗಿಲೆದ್ದಿದೆ.
ಮುಸ್ಲಿಂ ಮುತ್ತಹಿದ ಮಹಾಜ್ ನೇತೃತ್ವದಲ್ಲಿ ವಿರುದ್ಧ ಪ್ರತಿಭಟನೆ ನಡೆಯಿತು. ಮುಸ್ಲಿಂ ಅಲ್ಪ ಸಂಖ್ಯಾತರನ್ನು ಶೋಷಿಸಲು ಈ ಕಾಯ್ದೆ ಅಸ್ತ್ರವಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಅಲ್ಲದೆ, ಮಸೂದೆಗೆ ಒಪ್ಪಿಗೆ ಸೂಚಿಸದಂತೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ಮನವಿ ಸಲ್ಲಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿ ಬಳಿ ಬಂದ ನೂರಾರು ಪ್ರತಿಭಟನಾಕಾರರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಘೋಷಣಾ ವಾಕ್ಯಗಳನ್ನೂ ಕೂಗಿದರು.