ವಿಜಯಪುರ, ಅ. 14: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಡೋಣಿ ನದಿಯು ಪ್ರವಾಹ ಸೃಷ್ಟಿಸಿದ್ದು, ನದಿ ದಾಟುವ ವೇಳೆ ಟ್ರ್ಯಾಕ್ಟರ್ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದು, ಟ್ರಾಕ್ಟರ್ ನಲ್ಲಿದ್ದ ಇಬ್ಬರು ಈಜಿ ದಡ ಸೇರಿದ ಘಟನೆ ಇಂದು ನಡೆದಿದೆ.
ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಕಡಕೋಳ ಗ್ರಾಮದ ಬಳಿ ಹರಿಯುವ ಡೋಣಿ ನದಿಯಲ್ಲಿ ಡಬಲ್ ಟ್ರಾಲಿ ಟ್ರ್ಯಾಕ್ಟರ್ ಕೊಚ್ಚಿಕೊಂಡು ಹೋಗಿದೆ. ಕೊಚ್ಚಿ ಹೋಗಿದ್ದ ಟ್ರ್ಯಾಕ್ಟರ್ ಇಂಜಿನ್ ಅನ್ನು ರೈತರು ಹಗ್ಗ ಕಟ್ಟಿ ಜೆಸಿಬಿ ಮೂಲಕ ಹೊರ ತೆಗೆದಿದ್ದಾರೆ.