ಆಹಾರ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಆಹಾರ ಸೌಧಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಗ್ರಾಹಕರ ವ್ಯವಹಾರಗಳ ಹಾಗು ಮಾಪನಶಾಸ್ತ್ರ ಇಲಾಖೆ ವತಿಯಿಂದ ಆಯೋಜಿಸಿರುವ ಆಹಾರ ಸೌಧ ಕಟ್ಟಡದ ಡದ ಶಂಕು ಸಮಾರಂಭ ನೆರವೇರಿಸಿದರು. ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರಿಂದ “ಆಹಾರ ಸೌಧ” ಕಟ್ಟಡದ ಶಂಕುಸ್ಥಾಪನೆ ನೇರವೇರಿಸಿದರು.

ವೈಶಿಷ್ಟ್ಯತೆ

30000 ಚ.ಆಡಿ. ವಿಸ್ತೀರ್ಣ ಜಾಗದಲ್ಲಿ ನಿರ್ಮಾಣ ರೂ.49.50 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಕಚೇರಿ ಸಂಕೀರ್ಣ ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆಗಳಿಗೆ ಸಂಬಂಧಿಸಿದಂತೆ ಪ್ರಯೋಗಾಲಯ ನಿರ್ಮಾಣ ಮಾಡಲಾಗುತ್ತದೆ.

ಶ್ರೀ ಡಿ.ಕೆ. ಶಿವಕುಮಾರ್ ಮಾನ್ಯ ಉಪಮುಖ್ಯಮಂತ್ರಿಗಳು, ಶ್ರೀ ಕೆ.ಹೆಚ್. ಮುನಿಯಪ್ಪ, ಮಾನ್ಯ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಮತ್ತಿತ್ತರು ಉಪಸ್ಥಿತಿಯಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos