ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನ

ಸಾಮೂಹಿಕ ವಿವಾಹಕ್ಕಾಗಿ ಅರ್ಜಿ ಆಹ್ವಾನ

ಕೊಪ್ಪಳ, ಫೆ. 01: ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಶ್ರೀ ಕನಕಾಚಲಪತಿ ದೇವಸ್ಥಾನದಲ್ಲಿ ಏಪ್ರಿಲ್. 26 ರಂದು ಸಾಮೂಹಿಕ ವಿವಾಹ ನಡೆಯಲಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ಧಾರ್ಮಿಕ ದತ್ತಿ ಆಯುಕ್ತರು, ಬೆಂಗಳೂರು ಇವರ ನಿರ್ದೇಶನದಂತೆ ಇಲಾಖೆಯ ವ್ಯಾಪ್ತಿಗೆ ಒಳಪಡುವ ಪ್ರವರ್ಗ-ಎ ಅಧಿಸೂಚಿತ ದೇವಾಲಯವಾದ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಶ್ರೀ ಕನಕಾಚಲಪತಿ ದೇವಸ್ಥಾನದಲ್ಲಿ ಏಪ್ರಿಲ್. 26 ರಂದು ಸಾಮೂಹಿಕ ವಿವಾಹ ನಡೆಸಲು ಉದ್ದೇಶಿಸಲಾಗಿದೆ. ವಿವಾಹದಲ್ಲಿ ಪಾಲ್ಗೊಳ್ಳುವವರು ದೇವಾಲಯದ ಕಛೇರಿಗೆ ಬಂದು ಅರ್ಜಿ ಪಡೆದು ಅರ್ಜಿಯನ್ನು ವಿವಾಹ ನಡೆಯುವ ದಿನಾಂಕಕ್ಕೆ 30 ದಿನಗಳ ಮುಂಚಿತವಾಗಿ ಅಂದರೆ ಮಾರ್ಚ್. 27 ರೊಳಗಾಗಿ ಹೆಸರನ್ನು ನೋಂದಾಯಿಸಬೇಕು.

ನೋಂದಾಯಿಸಿಕೊಂಡಿರುವ ವಧು-ವರರ ವಿವರಗಳನ್ನು ದೇವಾಲಯದಲ್ಲಿ ಏಪ್ರಿಲ್. 01 ರಂದು ಪ್ರಕಟಿಸಲಾಗುತ್ತದೆ. ವಧು-ವರರ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 06 ಕೊನೆಯ ದಿನವಾಗಿದ್ದು, ಅಂತಿಮ ವಧು-ವರರ ಪಟ್ಟಿಯನ್ನು ಏಪ್ರಿಲ್ 11 ರಂದು ಪ್ರಕಟಿಸಲಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos