ಸುಳ್ಳು ಸುದ್ದಿ ನೀಡಿದ್ದಕ್ಕೆ ಮಾಜಿ ಸೈನಿಕನ ಬಂಧನ.!

ಸುಳ್ಳು ಸುದ್ದಿ ನೀಡಿದ್ದಕ್ಕೆ ಮಾಜಿ ಸೈನಿಕನ ಬಂಧನ.!

ಬೆಂಗಳೂರು, ಏ. 27, ನ್ಯೂಸ್ ಎಕ್ಸ್ ಪ್ರೆಸ್: ತಮಿಳುನಾಡಿನ ರಾಮನಾಥಪುರಂಗೆ 19 ಉಗ್ರರು ತಲುಪೊದ್ದು, ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ಸುಂದರ ಮೂರ್ತಿ ಎಂಬುವವರು ಬೆಂಗಳೂರು ಪೊಲೀಸ್ ನಿಯಂತ್ರಣ ಕೊಠಡಿಗೆ ದೂರು ನೀಡಿದ್ದರು.

ತಮಿಳುನಾಡಿನ ಬಂಪನ್ ಬ್ರಿಡ್ಜ್ ನಲ್ಲಿ ಯಾರೋ ಬಾಂಬ್ ಇಟ್ಟಿದ್ದಾರೆ ಎಂದು ಕರೆ ಮಾಡಿ ಸುಳ್ಳು ಸುದ್ದಿ ನೀಡಿದ್ದ ಮಾಜಿ ಸೈನಿಕನನ್ನು ಪೊಲೀಸರು ಬಂಧಿಸಿದ್ದಾರೆ.

ಕರೆ ಬರುತ್ತಿದ್ದಂತೆ ಆರೋಪಿ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲಾಗಿತ್ತು. ಆದರೆ ಕಂಟ್ರೋಲ್ ರೂಂಗೆ ಕರೆ ಮಾಡಿದ ಬಳಿಕ ಸುಂದರಮೂರ್ತಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದ. ಅವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮುನಿವೆಂಕಟೇಶ್ವರ ಲೇಔಟ್ ನಲ್ಲಿರುವ ಅವರ ಮನೆಯಲ್ಲೇ ಬಂಧಿಸಲಾಗಿದೆ. ಶ್ರೀಲಂಕಾದಲ್ಲಿ ಬಾಂಬ್ ಸ್ಫೋಟವಾಗಿತ್ತು. ಹಾಗೇ ನಮ್ಮಲ್ಲೂ ಆಗಬಹುದು ಎಂದು ಊಹಿಸಿದೆ. ನನ್ನ ಮನಸಿಗೆ ಬಂದಿದ್ದರಿಂದ ಮಾಡಿದೆ ಎಂದು ಪೊಲೀಸರಿಗೆ ತಿಳಿಸಿದ್ದ.

 

ಫ್ರೆಶ್ ನ್ಯೂಸ್

Latest Posts

Featured Videos