ಕೊಟ್ಟೂರು: ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕ ನೇಮರಾಜ್ ನಾಯ್ಕ್ವಿಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ಆರೋಗ್ಯ ಕೇಂದ್ರಕ್ಕೆ 20 ಬೆಡ್ಗಳನ್ನು ತಮ್ಮ ಸ್ವಂತ ಹಣದಲ್ಲಿ ನೀಡಿದ್ದಲ್ಲದೆ 30 ಅಕ್ಸಿಜನ್ ಸಿಲಿಂಡರ್ಗಳನ್ನು ನೀಡಿದರು. ರೋಗಿಗಳಿಗೆ ಮಾಸ್ಕ್ ವಿತರಣೆ ಮಾಡಿ ಹಾಗೂ ಅವರ ಆರೋಗ್ಯದ ಬಗ್ಗೆ ವೈದ್ಯ ಪೃಥ್ವಿಯೊಂದಿಗೆ ಸಮಾಲೋಚನೆ ನಡೆಸಿದರು. ರೋಗಿಗಳಿಗೆ ಆತ್ಮಸ್ಥೈರ್ಯ ಮತ್ತು ಧೈರ್ಯ ತುಂಬಿದರು
ಈ ಸಂದರ್ಭದಲ್ಲಿ ತಾಲೂಕು ಘಟಕ ಬಿಜೆಪಿ ಅಧ್ಯಕ್ಷ ಬಿ.ಅರ್ ವಿಕ್ರಂ, ಕೊಟ್ಟೂರು ಬಿಜೆಪಿ ಘಟಕದ ರಾಕೇಶ್, ಮಂಡಲದ ಉಪಾಧ್ಯಕ್ಷ ಉಮಾಪತಿ, ಮುಂಡಕ್ಕಿ ಪ್ರಕಾಶ್, ಇನ್ನು ಉಪಸ್ಥಿತರಿದ್ದರು.