ಬೆಂಗಳೂರು : ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಮಾಜಿ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರೂ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಮಾಧ್ಯಮ ವಿಭಾಗದ ಅಧ್ಯಕ್ಷ ಬಿ.ಎಲ್ ಶಂಕರ್, ಸಹಾಧ್ಯಕ್ಷ ವಿ.ಆರ್ ಸುದರ್ಶನ್, ಮಾಜಿ ಸಚಿವ ಎಚ್.ಎಂ ರೇವಣ್ಣ, ಪ್ರಿಯಾಂಕ್ ಖರ್ಗೆ ಮತ್ತಿತರರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಸಮಾಜ ಸೇವಕ, ಶತಾಯುಷಿ ಎಚ್.ಎಸ್. ದೊರೆಸ್ವಾಮಿ, ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್. ಪೇಟೆ ಕೃಷ್ಣ ಮತ್ತಿತರ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.