ನವದೆಹಲಿ, ಅ.28 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾಯ್ದೂಜ್ ಹಬ್ಬಕ್ಕೆ ರಾಷ್ಟ್ರ ರಾಜಧಾನಿಯ ಮಹಿಳೆಯರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ.
ನಾಳೆಯಿಂದ ದೆಹಲಿ ಸಾರಿಗೆ ಬಸ್(ಡಿಟಿಸಿ)ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಹಾಗೂ ಅವರ ಭದ್ರತೆಗಾಗಿ ಬಸ್ ಮಾರ್ಷಲ್ ಗಳ ಸಂಖ್ಯೆಯನ್ನು 13 ಸಾವಿರಕ್ಕೆ ಹೆಚ್ಚಿಸುವುದಾಗಿ ಸೋಮವಾರ ಘೋಷಿಸಿದ್ದಾರೆ.
ಇಂದು ತ್ಯಾಗರಾಜ್ ಸ್ಟೇಡಿಯಂನಲ್ಲಿ ಇತ್ತೀಚಿಗಷ್ಟೇ ನೇಮಕವಾದ ಬಸ್ ಮಾರ್ಷಲ್ ಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಭಾಯ್ದೂಜ್ ಹಬ್ಬದ ಪ್ರಯುಕ್ತ ಮಂಗಳವಾರ ಮಹಿಳೆಯರಿಗೆ ಸರ್ಕಾರಿ ಬಸ್ನಲ್ಲಿ ಉಚಿತ ಪ್ರಯಾಣ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.