ಉಪನ್ಯಾಸಕರ ಸ್ನೇಹ ಸಮ್ಮಿಲನ

ಉಪನ್ಯಾಸಕರ ಸ್ನೇಹ ಸಮ್ಮಿಲನ

ಪೀಣ್ಯ: ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ಕೃಷ್ಣಾನಂದ ನಗರದ ದೇವಮ್ಮ ಕರೀಗೌಡ ಕನ್ವೆನ್ಷನ್ ಹಾಲ್ ನಲ್ಲಿ ಬೆಂಗಳೂರು ಶಿಕ್ಷಕರ ಜೆಡಿಎಸ್ ಪಕ್ಷದ ಅಭ್ಯರ್ಥಿ ಪರವಾಗಿ ಶಿಕ್ಷಕರ ಹಾಗೂ ಉಪನ್ಯಾಸಕರ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ, ಹಾಗೂ ಜೆಡಿಎಸ್ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಸಿ. ರಾಜಣ್ಣ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.
ವಿಧಾನಪರಿಷತ್ ಗೆ ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಚುನಾವಣೆ ನಡೆಯಲಿದ್ದು, ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ರಾಜ್ಯ ವಕೀಲರ ಸಂಘದ ಅಧ್ಯಕ್ಷ ಎ. ಪಿ. ರಂಗನಾಥ್ ಅವರಿಗೆ ಪಕ್ಷ ಟಿಕೆಟ್ ನೀಡಿದ್ದು, ಇಲ್ಲಿ ನೆರೆದಿರುವ ಎಲ್ಲ ಶಿಕ್ಷಕ ಬಂಧುಗಳು ರಂಗನಾಥ ಅವರನ್ನು ನಿಮ್ಮ ಪ್ರತಿನಿಧಿಯಾಗಿ ಪ್ರಥಮ ಪ್ರಾಶಸ್ತ್ಯ ಮತ ನೀಡಿ ಪ್ರಚಂಡ ಬಹುಮತದಿಂದ ಮೇಲ್ಮನೆ ವಿಧಾನ ಪರಿಷತ್‌ಗೆ ಆರಿಸಿ ಕಳುಹಿಸಬೇಕೆಂದು ಮನವಿ ಮಾಡಿದರು.
ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ರಂಗನಾಥ್ ಮಾತನಾಡಿ ೨೮ನೇ ತಾರೀಖು ಚುನಾವಣೆ ನಡೆಯಲಿದ್ದು ಜೆಡಿಎಸ್ ಪಕ್ಷದ ಅಭ್ಯರ್ಥಿ ಯಾಗಿ ನನ್ನ ಫೋಟೋ ಇರುತ್ತದೆ ಅದರ ಮುಂದೆ ಒಂದು ಗೆರೆ ಎಳೆದರೆ ಸಾಕು ನಿಮ್ಮ ಮತ ನಮಗೆ ಬೀಳುತ್ತದೆ. ಈ ಕ್ಷೇತ್ರದಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಿಂದ ಬಂದು ನೆಲಸಿರುವ ಹಲವಾರು ಶಿಕ್ಷಕರಿದ್ದಾರೆ ಅವರೆಲ್ಲರಿಗೂ ಹೇಳಿ ಮತ ಹಾಕಿಸಿ ನನ್ನ ಗೆಲ್ಲಿಸಿ ಎಂದು ಮನವಿ ಮಾಡಿದರು.

ಫ್ರೆಶ್ ನ್ಯೂಸ್

Latest Posts

Featured Videos