ವಾಹನ ಸವಾರರಿಗೆ ಫುಲ್ ಟೆನ್ಶನ್

ವಾಹನ ಸವಾರರಿಗೆ ಫುಲ್ ಟೆನ್ಶನ್

ರಾಮನಗರ, ಡಿ. 15 : ಬೊಂಬೆನಗರಿ ಚನ್ನಪಟ್ಟಣದಲ್ಲಿ ನಡೆಯುತ್ತಿರುವ ಹೈಟೆನ್ಷನ್ ಕಾಮಗಾರಿ ಇದೀಗ ವಾಹನ ಸವಾರರಿಗೆ ಪೀಕಲಾಟವನ್ನು ತಂದೊಡ್ಡಿದೆ. ಹೈಟೆನ್ಷನ್ ಕಾಮಗಾರಿ ಹೆಸರಿನಲ್ಲಿ ಚನ್ನಪಟ್ಟಣ-ಸಾತನೂರು ರಸ್ತೆಯಲ್ಲಿ ತೆರೆದಿರುವ ಗುಂಡಿಗಳು ಸಾವಿಗೆ ಆಹ್ವಾನವನ್ನ ನೀಡುತ್ತಿವೆ.

ಚನ್ನಪಟ್ಟಣದ ಸಾತನೂರು ವೃತ್ತದಿಂದ ನೀಲಸಂದ್ರದವರೆಗೂ ಸುಮಾರು 4 ಕಿ.ಮೀನಷ್ಟು ದೂರದವರೆಗೆ ಕೆಪಿಟಿಸಿಎಲ್ ವತಿಯಿಂದ ಹೈಟೆನ್ಷನ್ ವೈರ್ ಕಾಮಗಾರಿ ನಡೆಯುತ್ತಿದೆ. ಆದರೆ, ಈ ಕಾಮಗಾರಿಗೆ ಸಂಬಂಧಿಸಿದಂತೆ ಮುನ್ನೆಚರಿಕಾ ಕ್ರಮವನ್ನು ತೆಗೆದುಕೊಳ್ಳದೇ ಇರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಇದರಿಂದ ವಾಹನ ಸವಾರರು ಬೆಳಗ್ಗೆ ಹಾಗೂ ರಾತ್ರಿ ವೇಳೆ ಸಾಕಷ್ಟು ಆತಂಕದಲ್ಲೇ ವಾಹನ ಚಲಾಯಿಸುತ್ತಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos