ರಾಯಚೂರು, ಡಿ. 6: ಶಕ್ತಿನಗರದ ಇಂಜಿನಿಯರ್ ಕೊಲೆ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಭೇದಿಸುವಲ್ಲಿ ಪಾತ್ರ ವಹಿಸಿದ್ದ ಶ್ವಾನ ರೂಬಿಗೆ ಗೌರವ ವಂದನೆಗಳೊಂದಿಗೆ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಡಾಬರ್ಮನ್ ಜಾತಿಗೆ ಸೇರಿರುವ ರೂಬಿಗೆ ಬೆಂಗಳೂರಿನ ಆಡುಗೋಡಿಯಲ್ಲಿ ತರಬೇತಿ ನೀಡಲಾಗಿದ್ದು, ಕಳೆದ ಮೂರು ತಿಂಗಳಿನಿಂದ ರಾಯಚೂರಿನ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ರೂಬಿ ಸಾವನ್ನಪ್ಪಿದೆ.