ಗಾಬರಿಯಾಗ್ಬೇಡಿ : ಜಾರಕಿಹೊಳಿ

ಗಾಬರಿಯಾಗ್ಬೇಡಿ : ಜಾರಕಿಹೊಳಿ

ಬೆಳಗಾವಿ, ಅ.23 : ಯಾರೂ ಗಾಬರಿಯಾಗಬೇಡಿ ನಾನು ನಿಮ್ಮ ಜೊತೆ ಇದ್ದೇನೆ ಎಂದು ಫೋನ್ ಮುಖಾಂತರ ಗೋಕಾಕ್ ಜನರಿಗೆ ಅನರ್ಹ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೋಳಿ ಧೈರ್ಯ ತುಂಬಿದ್ದಾರೆ.
ಬೆಳಗಾವಿ ಜಿಲ್ಲೆ ಗೋಕಾಕ್ನಲ್ಲಿ ಮಲ್ಲಿಕಾರ್ಜುನ ಗುಡ್ಡದ ಮೇಲಿನ ಬಂಡೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರವಾಣಿ ಮುಖಾಂತರ ಕರೆ ಮಾಡಿ ಅಲ್ಲಿ ನಲೆಸಿರುವಂತಹ ಜನರಿಕೆ ರಮೇಶ್ ಜಾರಕಿಹೊಳಿ ಧೈರ್ಯ ತುಂಬಿದ್ದಾರೆ.
ಸದ್ಯ ಜಿಲ್ಲೆಯಾದ್ಯಂತ ಕಳೆದ 2 ತಿಂಗಳಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜಿಲ್ಲೆಯ ಗೋಕಾಕ್ ನಗರದ ಮಲ್ಲಿಕಾರ್ಜುನ ಗುಡ್ಡದ ಮೇಲಿನ ಬಂಡೆಗಳು ಕುಸಿಯುವ ಭೀತಿ ಉಂಟಾಗಿದೆ.
ಈಗಾಗಲೇ ಗೋಕಾಕ್ ನಗರದ ಮಲ್ಲಿಕಾರ್ಜುನ ಗುಡ್ಡದ ಮೇಲಿನ ಬಂಡೆಗಳು ಸ್ವಲ್ಪ ಸ್ವಲ್ಪವಾಗಿ ಕುಸಿಯುತ್ತಿರುವುದರಿಂದ ಗುಡ್ಡದ ಕೆಳಗಿನ ಭಾಗದ ಮನೆಗಳಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮೂಡಿದೆ

ಫ್ರೆಶ್ ನ್ಯೂಸ್

Latest Posts

Featured Videos