ಗಂಭೀರ್,ಸಿಂಧಿಯಾ ಸಿರಿವಂತ ಅಭ್ಯರ್ಥಿಗಳು

ಗಂಭೀರ್,ಸಿಂಧಿಯಾ ಸಿರಿವಂತ ಅಭ್ಯರ್ಥಿಗಳು

ನವದೆಹಲಿ, ಮೇ. 4, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭಾ ಚುನಾವಣೆಗೆ ಮೇ. 12 ರಂದು 6 ನೇ ಹಂತದ ಮತದಾನ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿ ಜ್ಯೋತಿರಾಧಿತ್ಯ ಸಿಂಧಿಯಾ ಮತ್ತು ಬಿಜೆಪಿ ಅಭ್ಯರ್ಥಿ, ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಕಣದಲ್ಲಿರುವ ಸಿರಿವಂತ ಅಭ್ಯರ್ಥಿಗಳು ಎಂದು ನ್ಯಾಷನಲ್ ಎಲೆಕ್ಷನ್ ವಾಚ್ ಮತ್ತು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ವರದಿಯಲ್ಲಿ ಹೇಳಿದೆ.

374 ಕೋಟಿ ರೂ. ಮೌಲ್ಯದ ಸಂಪತ್ತಿನೊಂದಿಗೆ ಸಿಂಧಿಯಾ 1 ಸ್ಥಾನದಲ್ಲಿದ್ದಾರೆ. ಸಿಂಧಿಯಾ ಅವರು ಪಶ್ಚಿಮ ಉತ್ತರ ಪ್ರದೇಶದ ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿದ್ದಾರೆ.

45,58,00,245 ರೂ. ಮೌಲ್ಯದ ಚರಾಸ್ತಿ ಮತ್ತು 3,28,98,18,500 ರೂ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಸಿಂಧಿಯಾ ಗುನಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಗೌತಮ್ ಗಂಭೀರ್ ಅವರು 147 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಘೋಷಿಸಿದ್ದು, 1,19,15,87,789 ಚರಾಸ್ತಿ ಮತ್ತು 28,00,00,000 ರೂ ಮೌಲ್ಯದ ಸ್ಥಿರಾಸ್ತಿ ಹೊಂದಿರುವುದಾಗಿ ದಾಖಲೆ ಸಲ್ಲಿಸಿದ್ದಾರೆ. 2017 -18 ರಲ್ಲಿ 12 ಕೋಟಿ ರೂ. ಆದಾಯ ತೆರಿಗೆ ಕಟ್ಟಿರುವುದಾಗಿ ಗಂಭೀರ್ ತಿಳಿಸಿದ್ದಾರೆ.

102 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೊಂದಿಗೆ ಭಾರತೀಯ ಲೋಕದಳದ ವಿರೇಂದರ್ ರಾಣಾ ಮೂರನೇ ಸ್ಥಾನದಲ್ಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos