ನವದೆಹಲಿ, ಮಾ.22, ನ್ಯೂಸ್ ಎಕ್ಸ್ ಪ್ರೆಸ್: ಭಾರತದ ಕ್ರಿಕೆಟ್ ತಂಡದ ಮಾಜಿ ಆಟಗಾರ ಗೌತಮ್ ಗಂಭೀರ್ ಶುಕ್ರವಾರ ಬಿಜೆಪಿ ಸೇರಿದರು.
ಕೇಂದ್ರ ಸಚಿವರಾದ ಅರುಣ್ ಜೇಟ್ಲಿ ಮತ್ತು ರವಿಶಂಕರ್ ಪ್ರಸಾದ್ ಸಮ್ಮುಖದಲ್ಲಿ ಗಂಭೀರ್ ಬಿಜೆಪಿ ಸೇರ್ಪಡೆಗೊಂಡರು.
ಪದ್ಮಶ್ರೀ ಪುರಸ್ಕೃತ 37ರ ಹರೆಯದ ಗಂಭೀರ್ ಅವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ.