ನವದೆಹಲಿ, ಏ. 24, ನ್ಯೂಸ್ ಎಕ್ಸ್ ಪ್ರೆಸ್: ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ನ ಮಾಜಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ದಿ. ಎನ್ ಡಿ ತಿವಾರಿ ಅವರ ಪುತ್ರ ರೋಹಿತ್ ಶೇಖರ್ ಅವರ ನಿಗೂಢ ಸಾವಿನ ಪ್ರಕರಣವನ್ನು ಪೊಲೀಸರು 1 ವಾರದಲ್ಲಿ ಭೇದಿಸಿದ್ದಾರೆ.
ಇದು ಸಹಜ ಸಾವಲ್ಲ, ಕೊಲೆ ಎಂದು ತನಿಖೆಯ ವೇಳೆ ಸಾಬೀತಾಗಿದ್ದು, ವೈವಾಹಿಕ ಬದುಕಿನ ಕುರಿತು ಸಂತೃಪ್ತಿ ಇಲ್ಲದ ಕಾರಣಕ್ಕೆ ರೋಹಿತ್ ಪತ್ನಿ ಅಪೂರ್ವ ತಿವಾರಿ ಅವರೇ ಪತಿಯನ್ನು ಕೊಂದಿದ್ದಾರೆಂಬ’ ಆಘಾತಕಾರಿ ಸಂಗತಿಯನ್ನು ಪೊಲೀಸರು ಹೊರಹಾಕಿದ್ದಾರೆ.
ರೋಹಿತ್ ಸಾವಿಗೆ ಸಂಬಂಧಿಸಿದಂತೆ ಹೊರಬಂದ ವೈದ್ಯಕೀಯ ವರದಿಯಲ್ಲಿ ಇದು ಸಹಜ ಸಾವಲ್ಲ, ಅವರು ಉಸಿರುಗಟ್ಟಿ ಸತ್ತಿದ್ದಾರೆ ಎನ್ನಲಾಗಿತ್ತು. ಇದೇ ಎಳೆಯನ್ನಿಟ್ಟುಕೊಂಡು ಪೊಲೀಸರು ರೋಹಿತ್ ಶೇಖರ್ ಅವರ ಮನೆಕೆಲಸದವರನ್ನೂ, ಅವರ ಪತ್ನಿ ಅಪೂರ್ವ ಸವರನ್ನೂ ನಿಗೂಢ ಸ್ಥಳವೊಂದಕ್ಕೆ ಕರೆದೊಯ್ದು ತನಿಖೆ ನಡೆಸಿದ್ದರು. ಈ ಸಂದರ್ಭದಲ್ಲಿ ಪತಿಯನ್ನು ತಾನೇ ಕೊಂದಿದ್ದಾಗಿ ಅಪೂರ್ವ ಅವರು ಸುಳಿವು ಬಿಟ್ಟುಕೊಟ್ಟಿದ್ದರು.