ಗಾಂಧಿ ಪ್ರತಿಮೆಗೆ ಗುಂಡು ಹಾರಿಸಿದ್ದ ಹಿಂದೂ ಮಹಾಸಭಾ ನಾಯಕಿ ಬಂಧನ

ಗಾಂಧಿ ಪ್ರತಿಮೆಗೆ ಗುಂಡು ಹಾರಿಸಿದ್ದ ಹಿಂದೂ ಮಹಾಸಭಾ ನಾಯಕಿ ಬಂಧನ

ಆಲಿಘರ್: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಪ್ರತಿಕೃತಿಗೆ ಗುಂಡಿಕ್ಕಿದ ಅಖಿಲ ಭಾರತ ಹಿಂದೂ ಮಹಾಸಭಾ ನಾಯಕಿ ಪೂಜಾ ಪಾಂಡೆ ಮತ್ತು ಆಕೆಯ ಪತಿ ಅಶೋಕ್ ಪಾಂಡೆಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಉ.ಪ್ರದೇಶದ ತಪ್ಪಲ್ ಎಂಬಲ್ಲಿಂದ ಈ ಇಬ್ಬರಿಂದ ಬಂಧಿಸಲಾಗಿದೆ.

“ಯಾವುದೇ ಪಶ್ಚಾತ್ತಾಪವಿಲ್ಲ. ನಾನು ಯಾವುದೇ ಅಪರಾಧ ಮಾಡಿಲ್ಲ. ನಮ್ಮ ಸಾಂವಿಧಾನಿಕ ಹಕ್ಕನ್ನು ಬಳಸಿದ್ದೇವೆ ಅಷ್ಟೇ” ಎಂದು ಪೂಜಾ ಪಾಂಡೆ ತನ್ನ ಬಂಧನದ ನಂತರ ಸುದ್ದಿಗಾರರಿಗೆ
ಹೇಳಿದ್ದಾರೆ.

ಈ ಮೊದಲು ಮಹಾತ್ಮಾ ಗಾಂಧೀಜಿಯವರ ಪ್ರತಿಕೃತಿ ದಹಿಸಿದ ಪ್ರಕರಣಕ್ಕೆ ಸಂಬಂಧಿಸಿ ಐವರನ್ನು ಬಂಧಿಸಲಾಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos